ಕರಾವಳಿ
Trending

ಕೋವಿಡ್ – 19 ಗುಣಮುಖ ಉಡುಪಿ ಮೊದಲ ಸ್ಥಾನ ಶಾಸಕ ಕೆ. ರಘುಪತಿ ಭಟ್

ಕೋವಿಡ್ – 19 ಸೋಂಕಿತರ ಸಂಖ್ಯೆಯಲ್ಲಿ ಉಡುಪಿ ಪ್ರಥಮ ಸ್ಥಾನದಲ್ಲಿ ಇದ್ದರೂ ಕೋವಿಡ್ – 19 ನಿಂದ ಗುಣಮುಖರಾದವರಲ್ಲಿಯೂ ಉಡುಪಿ ಮೊದಲ ಸ್ಥಾನದಲ್ಲಿದೆ. ಜಿಲ್ಲಾಡಳಿತದ ಜವಾಬ್ದಾರಿಯುತ ಕಾರ್ಯವೈಖರಿ ಹಾಗೂ ಉಡುಪಿಯ ಜನರ ಜಾಗೃತಿಯಿಂದ ಕೋವಿಡ್ – 19 ನಿಯಂತ್ರಣದಲ್ಲಿದೆ ಎಂದು ಶಾಸಕ ರಘುಪತಿ ಭಟ್ ಹೇಳಿದರು.

ಜನರಲ್ಲಿ ಕೋವಿಡ್ – 19 ವಿರುದ್ಧ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ದಿ. 18-06-2020 ರಂದು ಜಿಲ್ಲಾಡಳಿತ ಹಾಗೂ ನಗರಸಭೆ ವತಿಯಿಂದ ಮಾಸ್ಕ್ ದಿನ ಆಚರಣೆಯ ಜನ ಜಾಗೃತಿ ಜಾಥಾಕ್ಕೆ ಚಾಲನೆಯನ್ನು ನೀಡಿ ಮಾತನಾಡಿದರು.

ಕೋವಿಡ್ – 19 ಕುರಿತು ಭಯ ಪಡುವ ಅಗತ್ಯವಿಲ್ಲ. ಆದರೆ ಮಾಸ್ಕ್ ಧರಿಸಿ, ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ನಮ್ಮ ನಮ್ಮ ಸುರಕ್ಷತೆ ಬಗ್ಗೆ ಗಮನ ಹರಿಸಬೇಕು. ಸರ್ಕಾರ, ಅಧಿಕಾರಿಗಳೊಂದಿಗೆ ಜನಸಾಮಾನ್ಯರು ಕೈಜೋಡಿಸಿ ಕೋವಿಡ್ – 19 ವಿರುದ್ಧ ಹೋರಾಡಬೇಕು. ಆಗ ನಾವು ಯಶಸ್ವಿಯಾಗುತ್ತೇವೆ ಎಂದು ಹೇಳಿದರು.

ಬಳಿಕ ನಗರಸಭೆಯಿಂದ ತಾಲೂಕ ಆಫೀಸ್ ವೃತ್ತದವರೆಗೆ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಜನ ಜಾಗೃತಿ ಜಾಥ ನೆರವೇರಿತು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಜಿ ಜಗದೀಶ್, ಅಪರ ಜಿಲ್ಲಾಧಿಕಾರಿಗಳಾದ ಸದಾಶಿವ್ ಪ್ರಭು, ಉಡುಪಿ ಪೋಲಿಸ್ ಉಪ ಅಧೀಕ್ಷಕರಾದ ಜೈಶಂಕರ್, ಪೌರಾಯುಕ್ತರಾದ ಆನಂದ್ ಸಿ ಕಲ್ಲೋಲಿಕರ್, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಮೋಹನ್ ರಾಜ್ ಹಾಗೂ ನಗರಸಭೆಯ ಅಧಿಕಾರಿಗಳು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!