ರಾಜ್ಯ
Trending

‘ಗಾಂಧಿ ಜಯಂತಿ’ ಸೇರಿ ಎಲ್ಲ ಜಯಂತಿಗಳ ರಜೆ ರದ್ಧತಿಗೆ ‘ರಾಜ್ಯ ಸರ್ಕಾರ’ಕ್ಕೆ ಶಿಫಾರಸು

ಬೆಂಗಳೂರು: ಗಾಂಧಿ ಜಯಂತಿ ಸೇರಿದಂತೆ ಎಲ್ಲ ಗಣ್ಯರ ಜಯಂತಿಗಳಿಗೆ ಶಾಲಾ-ಕಾಲೇಜುಗಳಿಗೆ ರಜೆ ನೀಡುವುದರ ಬದಲು, ಅರ್ಥಪೂರ್ಣ ಆಚರಣೆಗೆ ಸರ್ಕಾರದ ಶಿಕ್ಷಣ ಸುಧಾರಣೆ ಸಲಹೆಗಾರ ಪ್ರೊ. ಎಂ.ಆರ್. ದೊರೆಸ್ವಾಮಿ ರಾಜ್ಯ ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದಾರೆ. ಅವರು ಗುರುವಾರ ಬೆಂಗಳೂರಿನಲ್ಲಿ ಉನ್ನತ ಶಿಕ್ಷಣ ಪರಿಷತ್​ನಲ್ಲಿ ನಡೆದ ಸಭೆಯಲ್ಲಿ, ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರೊಂದಿಗೆ ಮಾತುಕತೆ ನಡೆಸಿ ಈ ಬಗ್ಗೆ ತಿಳಿಸಿದ್ದಾರೆ. ಸಭೆಯಲ್ಲಿ 7 ಪ್ರಮುಖ ಶಿಫಾರಸುಗಳ ವರದಿಯನ್ನು ಸಲ್ಲಿಸಿದರು. ರಜೆ ನೀಡುವುದರ ಬದಲು, ಅಂದು ಅಂತಹ ಗಣ್ಯ ವ್ಯಕ್ತಿಗಳ ಬಗ್ಗೆ ಉಪನ್ಯಾಸ- ಕಾರ್ಯಾಗಾರವನ್ನು ಆಯೋಜಿಸಬೇಕು. ಆ ಮೂಲಕ ಇಂದಿನ ಪೀಳಿಗೆಯನ್ನು ಜಾಗೃತರನ್ನಾಗಿಸಬಹುದು. ಇದರಿಂದ ಜಯಂತಿಗಳಿಗೆ ನಿಜವಾದ ಅರ್ಥ ಬರಲಿದೆ ಎಂದು ಪ್ರೊ.‌ದೊರೆಸ್ವಾಮಿ ಸಲಹೆ‌‌‌ ನೀಡಿದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!