ಕರಾವಳಿ

ಸಚಿವ ಎಸ್ ಟಿ ಸೋಮಶೇಖರ್ : ಕೊರೊನಾ ಸೋಂಕಿನಿಂದ ಮೃತಪಟ್ಟ ರೈತರಿಗೆ 1 ಲಕ್ಷ ರೂ ಸಾಲ ಮನ್ನಾ!!

ಮಂಗಳೂರು: ಕೋವಿಡ್ ಸೋಂಕಿನಿಂದಾಗಿ ಮೃತಪಟ್ಟ ರೈತರ ಸಾಲದಲ್ಲಿ 1 ಲಕ್ಷ ರೂ ವನ್ನು ಮನ್ನಾ ಮಾಡಲಾಗುತ್ತದೆ ಎಂದು ಸಚಿವ ಎಸ್ ಟಿ ಸೋಮಶೇಖರ್ ತಿಳಿಸಿದ್ದಾರೆ .

ಮಂಗಳೂರಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಕೊವಿಡ್‌ನಿಂದ ಮೃತಪಟ್ಟ ರೈತರ ಸಾಲಮನ್ನಾಗೆ ಕರ್ನಾಟಕ ಸರ್ಕಾರ ತೀರ್ಮಾನ ಮಾಡಿದ್ದು, ಕೊರೊನಾದಿಂದ ಮೃತಪಟ್ಟ ರೈತರ ಸಾಲದ ಮೊತ್ತದಲ್ಲಿ 1 ಲಕ್ಷ ರೂಪಾಯಿ ಮನ್ನಾ ಮಾಡಲು ಸರ್ಕಾರ ನಿರ್ಧಾರ ಮಾಡಿದೆ  ಎಂದು ಮಾಹಿತಿ ನೀಡಿದರು.

ಕೊವಿಡ್‌ನಿಂದ ರಾಜ್ಯದಲ್ಲಿ ಒಟ್ಟು10,400 ಸಾಲಗಾರ ರೈತರು ಮೃತಪಟ್ಟಿದ್ದಾರೆ. ಇವರ ಸಾಲದ ಮೊತ್ತದಲ್ಲಿ ತಲಾ 1 ಲಕ್ಷ ರೂಪಾಯಿ ಮನ್ನಾ ಮಾಡಲಾಗುವುದು. ಇದರಿಂದಾಗಿ ಸರ್ಕಾರಕ್ಕೆ 81 ಕೋಟಿ ರೂಪಾಯಿ ಹೊರೆಯಾಗಲಿದೆ.

ಅಪೆಕ್ಸ್, ಡಿಸಿಸಿ ಬ್ಯಾಂಕ್ & ಪ್ಯಾಕ್ಸ್ ಗಳಲ್ಲಿ ಸಾಲ ಪಡೆದಿದ್ದ ಕೊರೋನಾದಿಂದ ಮೃತಪಟ್ಟಿರುವ 10187 ರೈತರ 79.47 ಕೋಟಿ ರೂಪಾಯಿ ಸಾಲ ಮನ್ನಾ ಮಾಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರವರು ಚಿಂತನೆ ನಡೆಸಿದ್ದು, ಇನ್ನು ಮೂರ್ನಾಲ್ಕು ದಿನಗಳಲ್ಲಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

Leave a Reply

Your email address will not be published. Required fields are marked *

Back to top button
error: Content is protected !!

Adblock Detected

Please consider supporting us by disabling your ad blocker