ಕರಾವಳಿ

ಕಲ್ಯಾಣಪುರ ರೋಟರಿ ವತಿಯಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

ರೋಟರಿ ಜಿಲ್ಲಾ ಯೋಜನೆ ವಿದ್ಯಾಸೇತು ಕಾರ್ಯಕ್ರಮದಡಿ ಕಲ್ಯಾಣಪುರ ರೋಟರಿ ವತಿಯಿಂದ ಟಿ.ಎಂ.ಎ. ಪೈ ಪ್ರೌಢ ಶಾಲೆ ಕಲ್ಯಾಣಪುರದ 41 ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಈ ದಿನ ಟಿ.ಎಂ.ಎ. ಪೈ ಪ್ರೌಢ ಶಾಲೆ ಕಲ್ಯಾಣಪುರದಲ್ಲಿ ಶಾಲಾ ಇಂಟರಾಕ್ಟ್ ಕ್ಲಬ್ ನ ಸಹಯೋಗದಲ್ಲಿ ನಡೆಯಿತು.

ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಶೇಖರ್ ರವರು ಈ ಕಾರ್ಯವನ್ನು ಶ್ಲಾಘಿಸಿ ಶಿಕ್ಷಣದ ಬಗ್ಗೆ ರೋಟರಿ ಸಂಸ್ಥೆಗೆ ಇರುವ ಕಾಳಜಿಯನ್ನು ತೋರಿಸುತ್ತದೆ ಎಂದು ಹೇಳಿದರು.

ವಲಯ ಸೇನಾನಿ ರೊಟೇರಿಯನ್ ಬ್ರಾಯನ್ ಡಿಸೋಜ, ಅಧ್ಯಕ್ಷ ರೊಟೇರಿಯನ್ ಶಂಭು ಶಂಕರ್, ಕಾರ್ಯದರ್ಶಿ ರೊಟೇರಿಯನ್ ಪ್ರಕಾಶ್ ಕುಮಾರ್ ಮತ್ತು ಚಯರ್ ಮ್ಯಾನ್ ರೊಟೇರಿಯನ್ ಲಿಯೋ ವಿಲಿಯಂ ಅಂದ್ರಾದೆ ರವರು ಸಮಯೋಚಿತವಾಗಿ ಮಾತನಾಡಿ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬಿದರು. ನಿಕಟಪೂರ್ವ ಅಧ್ಯಕ್ಷ ರೊಟೇರಿಯನ್ ಡೆಸ್ಮಂಡ್ ವಾಸ್, ಸದಸ್ಯರುಗಳಾದ ರೊಟೇರಿಯನ್ ವಿದ್ಯಾಧರ್ ಕಿಣಿ, ರೊಟೇರಿಯನ್ ರಾಮ ಪೂಜಾರಿ, ರೊಟೇರಿಯನ್ ರಾಮ ಕೃಷ್ಣ ಆಚಾರ್ಯ ರವರು ಉಪಸ್ಥಿತರಿದ್ದರು.

ನಂತರ ಮಿಲಾಗ್ರಿಸ್ ಕನ್ನಡ ಮಾಧ್ಯಮ ಪ್ರೌಢಶಾಲೆ, ಕಲ್ಯಾಣಪುರ. ಸರ್ಕಾರಿ ಪ್ರೌಢಶಾಲೆ, ಕೆಮ್ಮಣ್ಣು. ಹಾಗು ಕಾರ್ಮೆಲ್ ಪ್ರೌಢಶಾಲೆ, ಕೆಮ್ಮಣ್ಣು ಶಾಲೆ ಗಳಿಗೆ ಭೇಟಿ ನೀಡಿ ಸಾಂಕೇತಿಕ ಕಾರ್ಯಕ್ರಮವನ್ನು ಜರುಗಿಸಿ ತಲಾ 65, 20, 20 ರಂತೆ ಒಟ್ಟು ರೂ.14600. ವೆಚ್ಚದಲ್ಲಿ 146 ಪುಸ್ತಕಗಳನ್ನು ವಿತರಿಸಲಾಯಿತು.

Leave a Reply

Your email address will not be published. Required fields are marked *

Back to top button
error: Content is protected !!

Adblock Detected

Please consider supporting us by disabling your ad blocker