ಕರಾವಳಿ
ಕಿಶನ್ ಹೆಗ್ಡೆ ಕೊಲೆ ಪ್ರಕರಣ : ಐವರ ಬಂಧನ
ಉಡುಪಿ : ಉಡುಪಿ ಜಿಲ್ಲೆಯ ಹಿರಿಯಡ್ಕದಲ್ಲಿ ಕಿಶನ್ ಹೆಗ್ಡೆಯನ್ನು ಬರ್ಬರವಾಗಿ ಕೊಚ್ಚಿ ಕೊಲೆಗೈದ ಐದು ಹಂತಕರನ್ನು ಬ್ರಹ್ಮಾವರ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ ಪೆಕ್ಟರ್ ತಂಡ ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಬಂಧಿತ ಆರೋಪಿಗಳನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಕಿಶನ್ ಹೆಗ್ಡೆ ಕೊಲೆಯ ಪ್ರಮುಖ ಆರೋಪಿ ಮನೋಜ್ ಎಂದು ತಿಳಿದು ಬಂದಿದೆ, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಹಣದ ವ್ಯವಹಾರದ ವಿಷಯದಲ್ಲಿ ಕೊಲೆ ನಡೆದಿರಬಹುದು ಎನ್ನಲಾಗಿದೆ. ಕಿಶನ್ ಹೆಗ್ಡೆ ಕೊಲೆ ಪ್ರಕರಣವನ್ನು ಹಿರಿಯಡ್ಕ ಠಾಣೆಯ ಅಧಿಕಾರಿ ಸುಧಾಕರ್ ತೋನ್ಸೆ ಹಾಗೂ ಸರ್ಕಲ್ ಇನ್ಸ್ ಪೆಕ್ಟರ್ ಅನಂತ ಪದ್ಮನಾಭ ಅವರ ತಂಡ ತನಿಖೆ ನಡೆಸುತ್ತಿದ್ದಾರೆ.