ಕರಾವಳಿ

ಬೈಂದೂರು- ಕುಂದಾಪುರ ರಾ.ಹೆ.ಯಲ್ಲಿ ಸೇತುವೆ ಬಿರುಕು: ವಾಹನ ಸಂಚಾರ ಸ್ಥಗಿತ

ಕುಂದಾಪುರ, ಸೆ.26: ನೂತನವಾಗಿ ನಿರ್ಮಾಣ ಗೊಂಡ ಬೈಂದೂರು- ಕುಂದಾಪುರ ರಾಷ್ಟ್ರೀಯ ಹೆದ್ದಾರಿ 66ರಲ್ಲಿರುವ ಹೆಮ್ಮಾಡಿ ಸಮೀಪದ ಅರಾಟೆಯ ಸೇತುವೆಯಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಸದ್ಯ ಈ ಸೇತುವೆಯಲ್ಲಿ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.

ಪೂನಾದ ಐಆರ್‌ಬಿ ಗುತ್ತಿಗೆ ಕಂಪೆನಿಯು 3-4 ವರ್ಷಗಳ ಹಿಂದೆ ಕುಂದಾಪುರ- ಬೈಂದೂರು ರಾಷ್ಟ್ರೀಯ ಹೆದ್ದಾರಿ 66ರ ಚತುಷ್ಪಥ ಸೇತುವೆಯನ್ನು ನಿರ್ಮಾಣ ಮಾಡಿತ್ತು. ಆದರೆ ಇದೀಗ ಈ ಹೊಸ ಸೇತುವೆಯಲ್ಲಿ ಬಿರುಕು ಕಾಣಿಸಿಕೊಂಡಿರುವುದು ಆತಂಕಕ್ಕೆ ಕಾರಣವಾಗಿದೆ. ಈ ಸೇತುವೆಯಲ್ಲಿ ಸಂಚಾರ ಸ್ಥಗಿತಗೊಳಿಸಿರುವ ಪೊಲೀಸರು, ಇನ್ನೊಂದು ಬದಿಯಲ್ಲಿರುವ ಹಳೆಯ ಸೇತುವೆಯ ಮೂಲಕ ಎರಡು ಕಡೆಗಳ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!