ಕರಾವಳಿ

ಹಿರಿಯ ಹೃದ್ರೋಗ ತಜ್ಞ ಡಾ.ಎ.ವಿ.ಶೆಟ್ಟಿ ಇನ್ನಿಲ್ಲ

ಮಂಗಳೂರು, ಅ. 4 : ಖ್ಯಾತ ಹೃದ್ರೋಗ ತಜ್ಞ ಡಾ. ಆನಂದ್ ವೀರಣ್ಣ ಶೆಟ್ಟಿ(85) ಶನಿವಾರ ರಾತ್ರಿ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.

ಡಾ.ಎ.ವಿ.ಶೆಟ್ಟಿ ಅವರು ಕುಂದಾಪುರದವರಾಗಿದ್ದು, ಅವರು ಪ್ರವರ್ತಕ ವೈದ್ಯರಾಗಿದ್ದರು ಮತ್ತು ಜಿಲ್ಲೆಯ ಮೊದಲ ಹೃದ್ರೋಗ ತಜ್ಞರಾಗಿ ಗುರುತಿಸಿಕೊಂಡರು. ಮುಂಬೈ ವಿಶ್ವವಿದ್ಯಾಲಯದಿಂದ ‘ಪ್ರಿನ್ಸ್ ಆಫ್ ವೇಲ್ಸ್’ ಚಿನ್ನದ ಪದಕ ಪಡೆದಿದ್ದರು.

ಅವರು 1962 ರಲ್ಲಿ ಎಡಿನ್‌ಬರ್ಗ್‌ನ ರಾಯಲ್ ಕಾಲೇಜ್ ಆಫ್ ಫಿಸಿಶಿಯನ್ಸ್‌ನಲ್ಲಿ ಅಧ್ಯಯನ ಮಾಡಿ, 1963 ರಲ್ಲಿ ಎಂಆರ್‌ಸಿಪಿ ಪದವಿಯನ್ನು ಪೂರ್ಣಗೊಳಿಸಿದರು ಮತ್ತು 1974 ರಲ್ಲಿ ಎಫ್‌ಆರ್‌ಸಿಪಿ ಪದವಿಯನ್ನು ಪಡೆದರು. ಮಂಗಳೂರಿನ ಕಸ್ತೂರ್ಬಾ ವೈದ್ಯಕೀಯ ಕಾಲೇಜಿ ನಲ್ಲಿ ಹೃದ್ರೋಗ ವಿಭಾಗದ ಪ್ರಾಧ್ಯಾಪಕರಾಗಿ 25 ವರ್ಷಗಳ ಕಾಲ ಸೇವೆ ಸಲ್ಲಿಸಿದರು ಮತ್ತು ನಿವೃತ್ತಿ ನಂತರ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಹೃದ್ರೋಗ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *

Back to top button
error: Content is protected !!

Adblock Detected

Please consider supporting us by disabling your ad blocker