ಕರಾವಳಿ

ಬಂಟ್ವಾಳ : ರೌಡಿ ಶೀಟರ್ ಚೆನ್ನಾ ಫಾರೂಕ್ ಕೊಲೆ ಆರೋಪಿ ಮೇಲೆ ಪೋಲೀಸ್ ಫೈಯರಿಂಗ್ – ಓರ್ವ ಬಂಧನ ಇಬ್ಬರು ಪರಾರಿ

ಬಂಟ್ವಾಳ, ಅ. 24 : ಮೆಲ್ಕಾರ್‌‌ನಲ್ಲಿ ಶುಕ್ರವಾರ ನಡೆದ ಕೊಲೆ ಆರೋಪಿ ಖಲೀಲ್ ಮತ್ತು ಆತನ ಜೊತೆ ಇಬ್ಬರು ಆರೋಪಿಗಳು ಬೆಂಗಳೂರು ಕಡೆಗೆ ಹೋಗುತ್ತಿದ್ದ ಮಾಹಿತಿ ಮೇರೆಗೆ ಬಂಟ್ವಾಳದಿಂದ ಹಿಂಬಾಲಿಸಿ ಬಂಧಿಸಲು ಹೋದಾಗ, ಗುಂಡ್ಯ ಸಮೀಪ ಖಲೀಲ್ ಪೋಲೀಸರು ಮೇಲೆ ತಲವಾರು ದಾಳಿ ನಡೆಸಿದ್ದಾನೆ. ಆ ಸಂದರ್ಭದಲ್ಲಿ ಬಂಟ್ವಾಳ ನಗರ ಠಾಣಾ ಎಸ್.ಐ. ಅವಿನಾಶ್ ಫೈಯರಿಂಗ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಈ ಹಿನ್ನಲೆಯಲ್ಲಿ ನಟೋರಿಯಸ್ ಆರೋಪಿಗಳ ಬಂಧನಕ್ಕೆ ಎಸ್.ಐ.ಅವಿನಾಶ್ ಹಾಗೂ ಪ್ರಸನ್ನ ಆರೋಪಿಗಳ ಪತ್ತೆಗೆ ಮುಂದಾದ ವೇಳೆ ಪೋಲೀಸರ ಮೇಲೆ ದಾಳಿಗೆ ಮುಂದಾಗಿದ್ದ ಆರೋಪಿಗಳಿಗೆ ಗುಂಡಿನ ದಾಳಿ ನಡೆಸಿ ಬಂಧನ ನಡೆಸಿದ್ದಾರೆ‌. ಘಟನೆಯಲ್ಲಿ ಬಂಟ್ವಾಳ ಗ್ರಾಮಾಂತರ ಎಸ್.ಐ ಪ್ರಸನ್ನ ಅವರಿಗೆ ಹಾಗೂ ಕೊಲೆ ಆರೋಪಿ ಖಲೀಲ್‌ಗೆ ಗಾಯವಾಗಿದ್ದು ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಆ ವೇಳೆ ಹಫೀಜ್ ಹಾಗೂ ಇನ್ನೊಬ್ಬ ಆರೋಪಿ ಗುಡ್ಡೆಗೆ ಓಡಿ ಹೋಗಿ ತಪ್ಪಿಸಿಕೊಂಡಿದ್ದಾರೆ. ಉಪ್ಪಿನಂಗಡಿ ಎಸ್.ಐ.ಈರಯ್ಯ ಈತನ ಬಂಧನಕ್ಕೆ ಮುಂದಾಗಿದ್ದಾರೆ. ಖಲೀಲ್ ಈ ಹಿಂದೆ ಕೂಡ ಹಲವಾರು ಪ್ರಕರಣದಲ್ಲಿ ಭಾಗಿಯಾಗಿದ್ದು ಕೋಮು ಗಲಭೆ ಸಹಿತ ಆನೇಕ ಪ್ರಕರಣಗಳ ಪ್ರಮುಖ ಆರೋಪಿಯಾಗಿದ್ದು ಕಲ್ಲಡ್ಕದಲ್ಲಿ ಉಂಟಾಗುತ್ತಿದ್ದ ಗಲಾಟೆಗೆ ಈತ ಪ್ರಮುಖನಾಗಿದ್ದ. ಈತನ ಮೇಲೆ ಬಂಟ್ವಾಳ ನಗರ ಠಾಣೆಯಲ್ಲಿ ರೌಡಿಶೀಟರ್ ಆಗಿದ್ದು ಇತ್ತೀಚಿಗೆ ಈತನ ಗಡಿಪಾರು ಕೂಡ ಆಗಿತ್ತು. ಕಲ್ಲಡ್ಕ ಇತ್ತೀಚಿಗೆ ನಡೆದ ರತ್ನಾಕರ ಶೆಟ್ಟಿಯವರ ಮೇಲೆ ನಡೆದ ಹಲ್ಲೆ ಪ್ರಕರಣದಲ್ಲಿ ಈತನ ಗಡಿಪಾರು ನಡೆದಿತ್ತು.

Leave a Reply

Your email address will not be published. Required fields are marked *

Back to top button
error: Content is protected !!

Adblock Detected

Please consider supporting us by disabling your ad blocker