ಕರಾವಳಿ

ದ.ಕ ಜಿಲ್ಲೆಯಲ್ಲಿ ನಾಳೆಯಿಂದ ಮಧ್ಯಾಹ್ನ 1 ರವರೆಗೆ ಅಗತ್ಯ ಖರೀದಿಗೆ ಅವಕಾಶ – ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಆದೇಶ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜುಲೈ 5ರವರೆಗೂ ಲಾಕ್‍ಡೌನ್ ವಿಸ್ತರಿಸಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶಿಸಿದ್ದಾರೆ.

ದ.ಕ ಜಿಲ್ಲೆಯಲ್ಲಿ ಬೆಳಗ್ಗೆ 7 ರಿಂದ ಮಧ್ಯಾಹ್ನ 1ರವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದ್ದು, ಆಹಾರ, ದಿನಸಿ, ಹಣ್ಣು-ತರಕಾರಿ, ಮೀನು-ಮಾಂಸ, ಬೀದಿಬದಿ ವ್ಯಾಪಾರ ಮತ್ತು ಮದ್ಯ ಪಾರ್ಸಲ್‌ಗಷ್ಟೇ ಮಧ್ಯಾಹ್ನ 1ರವರೆಗೆ ಅವಕಾಶ ನೀಡಲಾಗಿದೆ. ಜೊತೆಗೆ ನಿರ್ಮಾಣ ಚಟುವಟಿಕೆ ಮತ್ತು ಸ್ಟೀಲ್, ಸಿಮೆಂಟ್ ಅಂಗಡಿಗಳಿಗೆ ಅನುಮತಿ ನೀಡಲಾಗಿದೆ.

ಈ ಸಮಯದಲ್ಲಿ ಮಾತ್ರ ಆಟೋ ರಿಕ್ಷಾ ಮತ್ತು ಟ್ಯಾಕ್ಸಿಗಳು ಇಬ್ಬರು ಪ್ರಯಾಣಿಕರ ಸಹಿತ ಸಂಚರಿಸಬಹುದು.

ಜಿಲ್ಲೆಯಲ್ಲಿ ಪಾರ್ಕ್ ಮತ್ತು ಸಾರ್ವಜನಿಕ ಉದ್ಯಾನವನ ತೆರೆಯಲು ಅವಕಾಶ ಇಲ್ಲ. ಖಾಸಗಿ ಹಾಗೂ ಕೆಎಸ್‍ಆರ್‌ಟಿಸಿ ಬಸ್‍ಗಳು ಜಿಲ್ಲೆಯಿಂದ ಹೊರಗೆ ಹಾಗೂ ಒಳಗೆ ಓಡಾಟ ಮಾಡುವಂತಿಲ್ಲ. ಅಲ್ಲದೆ ಹೊರ ಜಿಲ್ಲೆಗಳಿಂದಲೂ ಕೆಎಸ್‍ಆರ್ ಟಿಸಿ ಬಸ್‍ಗಳ ಓಡಾಟಕ್ಕೆ ನಿರ್ಬಂಧ ಹೇರಲಾಗಿದೆ.

ಜುಲೈ 5 ರವರೆಗೂ ಜಿಲ್ಲೆಯಾದ್ಯಂತ ಪ್ರತಿದಿನ ಸಂಜೆ 7ರಿಂದ ಬೆಳಗ್ಗೆ 7ರವರೆಗೆ ನೈಟ್ ಕಪ್ರ್ಯೂ ಜಾರಿ ಇರುತ್ತದೆ, ಯಾವುದೇ ವಾಹನ ಓಡಾಟಕ್ಕೂ ಅನುಮತಿ ಇಲ್ಲ. ಅಲ್ಲದೆ ಶುಕ್ರವಾರ ಸಂಜೆ 7ರಿಂದ ಸೋಮವಾರ ಬೆಳಗ್ಗೆ 7ರವರೆಗೆ ವೀಕೆಂಡ್ ಕಪ್ರ್ಯೂ ಜಾರಿ ಇದ್ದು, ಈ ವೇಳೆ ಯಾರೂ ಮನೆಯಿಂದ ಹೊರ ಬರುವಂತಿಲ್ಲ ಎಂದು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

Leave a Reply

Your email address will not be published. Required fields are marked *

Back to top button
error: Content is protected !!

Adblock Detected

Please consider supporting us by disabling your ad blocker