ರಾಜ್ಯ

ಶಾಲಾ ಕಾಲೇಜುಗಳ ಡಿಸೆಂಬರ್ ಅಂತ್ಯದವರೆಗೂ ಆರಂಭವಿಲ್ಲ: ಮಹತ್ವದ ನಿರ್ಧಾರ ಕೈಗೊಂಡ ಸರ್ಕಾರ

ಬೆಂಗಳೂರು: ಮಕ್ಕಳ ಹಿತದೃಷ್ಟಿಯಿಂದ ಡಿಸೆಂಬರ್ ಅಂತ್ಯದವರೆಗೆ ಶಾಲಾ ಕಾಲೇಜುಗಳನ್ನು ಆರಂಭಿಸದಿರಲು ಸರ್ಕಾರ ನಿರ್ಧಾರ ಕೈಗೊಂಡಿದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.

ಇಂದು ತಜ್ಞರೊಂದಿಗೆ ನಡೆಸಿದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಡಿಸೆಂಬರ್​ ಕೊನೆಯಲ್ಲಿ ಮತ್ತೊಮ್ಮೆ ತಜ್ಞರೊಂದಿಗೆ ಸಭೆ ನಡೆಸಿ ಬಳಿಕ ಶಾಲಾ ಆರಂಭಿಸುವ ಬಗ್ಗೆ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.

ಕೊರೊನಾ ಸೋಂಕಿನ ಕಾರಣದಿಂದಾಗಿ ಹಲವು ಪಾಲಕರು ಆತಂಕ ವ್ಯಕ್ತಪಡಿಸಿದ್ದರು. ಅಲ್ಲದೇ, ತಜ್ಞರೂ ಕೂಡ ಸಮ್ಮತಿ ಸೂಚಿಸಲಿಲ್ಲ. ಈ ಎಲ್ಲ ಕಾರಣಗಳನ್ನು ಪರಿಗಣಿಸಿ ಸಭೆಯಲ್ಲಿ ಯಾವುದೇ ಶಾಲೆ ಆರಂಭ ಮಾಡಬಾರದು ಅಂತಾ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

 

Related Articles

Leave a Reply

Your email address will not be published. Required fields are marked *

Back to top button
error: Content is protected !!