ಕರಾವಳಿ

ಕರ್ನಾಟಕ ರಾಜ್ಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆ ಉಡುಪಿ ಜಿಲ್ಲೆ, ಕುಂದಾಪುರ ತಾಲೂಕು ಘಟಕದ ನೂತನ ಕಚೇರಿ ಉದ್ಘಾಟನೆ

ಕುಂದಾಪುರ ಸೆ.5 : ಎಸ್ಡಿಎಂಸಿ ಸಮನ್ವಯ ವೇದಿಕೆಯ ಕಚೇರಿ ಉದ್ಘಾಟನೆ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ನೂತನ ಕಚೇರಿಯನ್ನು ಎಸ್ಡಿಎಂಸಿ ರಾಜ್ಯ ಅಧ್ಯಕ್ಷರಾದ ಶ್ರೀ ಮೊಯ್ದೀನ್ ಕುಟ್ಟಿಯವರು ರಿಬ್ಬನ್ ಕತ್ತರಿಸುವ ಮೂಲಕ ಕಚೇರಿಯನ್ನು ಉದ್ಘಾಟಿಸಿದರು.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಂದಾಪುರ ತಾಲೂಕು ಘಟಕದ ಅಧ್ಯಕ್ಷರಾದ ಎಸ್ ವಿ ನಾಗರಾಜ್ ರವರು ವಹಿಸಿದ್ದರು, ಮುಖ್ಯ ಅತಿಥಿಗಳಾಗಿ ಅಬ್ದುಲ್ ಸಲಾಂ ಚಿತ್ತೂರು, ಬೈಂದೂರು ವಲಯ ಉಪಾಧ್ಯಕ್ಷರಾದ ಅಯ್ಯೂಬ್ ಹಕ್ಲಾಡಿ, ಕುಂದಾಪುರ ಗರ್ಲ್ಸ್ ಶಾಲೆಯ ಶಿಕ್ಷಕಿ ಸುಮನ ಟೀಚರ್ ಉಪಸ್ಥಿತರಿದ್ದರು. ಕಾರ್ಯಕ್ರಮ ದಲ್ಲಿ ಕುಂದಾಪುರ ಮಿತ್ರ ಪತ್ರಿಕೆಯ ಸಂಪಾದಕರಾದ ಟಿ.ಪಿ. ಮಂಜುನಾಥ್ ಮತ್ತು ಶಿರೂರು ಮೇಲ್ಪಂಕ್ತಿ ಶಾಲೆಯ ಮುಖ್ಯ ಶಿಕ್ಷಕಿ ಜಯಂತಿ ಟೀಚರ್ ಅವರನ್ನು ಶಿಕ್ಷಕರ ದಿನಾಚರಣೆ ಪ್ರಯುಕ್ತ ಸನ್ಮಾನಿಸಲಾಯಿತು.

ಜಿಲ್ಲಾ ಅಧ್ಯಕ್ಷರಾದ ಅಬ್ದುಲ್ ಸಲಾಂ ಚಿತ್ತೂರು, ಪ್ರಾಸ್ತಾವಿಕವಾಗಿ ಮಾತನಾಡಿ ಸಮನ್ವಯ ವೇದಿಕೆ ಬೆಳೆದು ಬಂದ ದಾರಿ ಕಾರ್ಯಚಟುವಟಿಕೆ ಬಗ್ಗೆ ಸವಿಸ್ತಾರವಾಗಿ ತಿಳಿಸಿದರು. ಸನ್ಮಾನ ಪತ್ರವನ್ನು ಶ್ರೀಯುತ ಹರಿಶ್ಚಂದ್ರ ಆಚಾರ್ ಮತ್ತು ಶ್ರೀಮತಿ ಸವಿತಾ ಮನೋಜ್ ರವರು ವಾಚಿಸಿದರು. ಕಾರ್ಯಕ್ರಮದಲ್ಲಿ ರಾಜ್ಯ ಸಮಿತಿಯ ಪದಾಧಿಕಾರಿಗಳು ಜಿಲ್ಲಾ /ವಲಯ /ತಾಲೂಕು /ಪಂಚಾಯತ್ ಮಟ್ಟದ ಸಮಿತಿಯ ಪದಾಧಿಕಾರಿಗಳು ಎಸ್ಡಿಎಂಸಿ ಸಮನ್ವಯ ವೇದಿಕೆಯ ಸಂಪನ್ಮೂಲ ವ್ಯಕ್ತಿಗಳು, ಎಸ್ಡಿಎಂಸಿ ಸದಸ್ಯರು ಪೋಷಕರು ಶಿಕ್ಷಣ ಆಸಕ್ತರು ಉಪಸ್ಥಿತರಿದ್ದರು. ಕುಂದಾಪುರ ವಲಯ ಅಧ್ಯಕ್ಷರಾದ ಅವನೀಶ ಹೊಳ್ಳರು ಸರ್ವರನ್ನು ಸ್ವಾಗತಿಸಿ ಧನ್ಯವಾದ ನೀಡಿದರು, ಶ್ರೀಮತಿ ದೀಪ ಜಪ್ತಿ ಕಾರ್ಯಕ್ರಮವನ್ನು ನಿರೂಪಿಸಿದರು.

Leave a Reply

Your email address will not be published. Required fields are marked *

Back to top button
error: Content is protected !!

Adblock Detected

Please consider supporting us by disabling your ad blocker