ರಾಷ್ಟ್ರೀಯ

ಯುವಕನ ಮೊಬೈಲ್​ ಒಡೆದು ಕಪಾಳಕ್ಕೆ ಬಾರಿಸಿದ ಜಿಲ್ಲಾಧಿಕಾರಿ

ರಾಯ್ಪುರ್​: ಲಾಕ್​ಡೌನ್​ ನಡುವೆ ಕೆಲ ಔಷಧಿಗಳನ್ನು ತರಲು ಮನೆಯಿಂದ ಹೊರಬಂದಿದ್ದ ಯುವಕನ ಮೊಬೈಲ್​ ಒಡೆದು ಹಾಕಿದಲ್ಲದೆ, ಕಪಾಳಕ್ಕೂ ಬಾರಿಸಿ, ಜಿಲ್ಲಾಧಿಕಾರಿ ಅಮಾನವೀಯ ವರ್ತಿಸಿದ ಘಟನೆ ಛತ್ತೀಸ್​ಗಢದಲ್ಲಿ ನಡೆದಿದೆ.

ಇಷ್ಟೇ ಅಲ್ಲದೆ, ಸ್ಥಳದಲ್ಲಿದ್ದ ಪೊಲೀಸ್​ ಸಿಬ್ಬಂದಿಯನ್ನು ಕರೆದು ಥಳಿಸುವಂತೆ ಹೇಳಿ ಎಫ್​ಐಆರ್​ ದಾಖಲಿಸಲು ಆದೇಶಿಸಿದ್ದಾರೆ. ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಜಿಲ್ಲಾಧಿಕಾರಿಗಳ ನಡೆಗೆ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.
ಈ ಘಟನೆ ಛತ್ತೀಸ್​ಗಢದ ಸುರಾಜ್​ಪುರ್​ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲಾಧಿಕಾರಿ ರಣ್ಬೀರ್​ ಶರ್ಮಾ ಯುವಕನ ಮೊಬೈಲ್​ ಪಡೆದು ರಸ್ತೆಯ ಮೇಲೆ ಜೋರಾಗಿ ಎಸೆದು ಒಡೆದು ಹಾಕುವುದು ವಿಡಿಯೋದಲ್ಲಿ ದಾಖಲಾಗಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!