ನಾಪತ್ತೆಯಾಗಿದ್ದ ಶಾಸಕ ರೇಣುಕಾಚಾರ್ಯ ಸೋದರನ ಪುತ್ರನ ಶವ ಪತ್ತೆ!

ದಾವಣಗೆರೆ: ಕಳೆದ ಐದು ದಿನಗಳಿಂದ ನಾಪತ್ತೆಯಾಗಿದ್ದ
ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರ ಸಹೋದರ ಪುತ್ರ ಚಂದ್ರಶೇಖರ್ ಶವವಾಗಿ ಪತ್ತೆಯಾಗಿದ್ದಾರೆ.
ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಕಡದಕಟ್ಟೆ
ಗ್ರಾಮದ ಬಳಿಯ ತುಂಗಾ ಕಾಲುವೆಯಲ್ಲಿ ಚಂದ್ರಶೇಖರ್
ಕಾರು ಪತ್ತೆಯಾಗಿದ್ದು, ಕಾರಿನ ಹಿಂಬದಿ ಸೀಟಿನಲ್ಲಿ
ಚಂದ್ರಶೇಖರ್ ಶವ ಕೂಡ ಪತ್ತೆಯಾಗಿದೆ.
ಭದ್ರಾ ಮೇಲ್ದಂಡೆ ಕಾಲುವೆಗೆ ಕಾರು ಬಿದ್ದ ಶಂಕೆ ವ್ಯಕ್ತವಾದ
ಹಿನ್ನೆಲೆಯಲ್ಲಿ ಕಾಲುವೆಯಲ್ಲಿ ಶೋಧ ಮಾಡಿದಾಗ ಬಿಳಿ
ಬಣ್ಣದ ಕ್ರೇಟಾ ಕಾರು ಪತ್ತೆಯಾಗಿದೆ. ಶೋಧ ಕಾರ್ಯಾಚರಣೆ ವೇಳೆ ಶಾಸಕ ರೇಣುಕಾಚಾರ್ಯ, ಪೊಲೀಸರು ಸೇರಿದಂತೆ ನೂರಾರು ಜನರು ಕಾಲುವೆ ಬಳಿ ಜಮಾಯಿಸಿದ್ದರು.
ಸಹೋದರನ ಪುತ್ರನ ಕೊಳೆತ ಮೃತದೇಹ ನೋಡಿ ಶಾಸಕ
ರೇಣುಕಾಚಾರ್ಯ ಗೋಳಾಡಿದ ಘಟನೆ ನಡೆಯಿತು.
ಚಂದ್ರಶೇಖರ್ ಅವರ ಕ್ರೇಟಾ ಕಾರು ಸೊರಟೂರು ಬಳಿ
ಇರುವ ತುಂಗಾಭದ್ರ ಕಾಲುವೆಯಲ್ಲಿ ಸಿಕ್ಕಿದೆ. ಹೊನ್ನಾಳಿ
ಹಾಗೂ ನ್ಯಾಮತಿ ಮಾರ್ಗ ಮಧ್ಯ ಇರುವ ಕಾಲುವೆಯಲ್ಲಿ
ಪತ್ತೆಯಾದ ಕಾರನ್ನು ಮೇಲಕ್ಕೆ ಎತ್ತಲಾಗಿದೆ. ಕಾರಿನಲ್ಲೇ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಕಳೆದ ಐದು ದಿನಗಳಿಂದ ನಾಪತ್ತೆಯಾಗಿದ್ದ ಚಂದ್ರಶೇಖರ್
ಪತ್ತೆಗೆ ಪೊಲಿಸರು ತೀವ್ರ ಹುಡುಕಾಟ ನಡೆಸಿದ ಪೊಲೀಸರಿಗೆ ಕಡದಕಟ್ಟೆ ಗ್ರಾಮದ ತುಂಗಾ ಕಾಲುವೆ ಬಳಿ ಚಂದ್ರಶೇಖರ್ ಕಾರು ಸಂಚರಿಸಿದೆ ಎಂಬ ಕುರುಹು ಪತ್ತೆಯಾಗಿತ್ತು, ಈ ಹಿನ್ನೆಲೆಯಲ್ಲಿ ತುಂಗಾ ಕಾಲುವೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿ ರೇಣುಕಾಚಾರ್ಯ ಗೋಳಿಡುತ್ತಿದ್ದಾರೆ.
ಹೊನ್ನಾಳಿ ಕ್ಷೇತ್ರದ ಶಾಸಕ ಎಂ.ಪಿ. ರೇಣುಕಾಚಾರ್ಯ
ಸೋದರ ಪುತ್ರ ಚಂದ್ರಶೇಖರ್ ನಾಪತ್ತೆಯಾಗಿ 5
ದಿನವಾದರೂ ಚಂದ್ರಶೇಖರ್ ಬಗ್ಗೆ ಸುಳಿವು ಸಿಕ್ಕಿಲ್ಲ.
ಚಂದ್ರಶೇಖರ್ ನಾಪತ್ತೆಯಿಂದ ಕುಟುಂಬಸ್ಥರು
ಕಂಗಾಲಾಗಿದ್ದರು. ಅಣ್ಣನ ಮಗ ನಾಪತ್ತೆಯಾದ ಶಾಸಕ
ರೇಣುಕಾಚಾರ್ಯ ಕಣ್ಣೀರು ಸುರಿಸಿದ್ದರು. ಎಲ್ಲಿದ್ದಿಯಾ
ಚಂದ್ರು ಬಾರೋ ಎಂಬುದಾಗಿ ಅಲವತ್ತು ಕೊಂಡಿದ್ದರು. ಈ
ಬೆನ್ನಲ್ಲೇ ಶಾಸಕ ರೇಣುಕಾಚಾರ್ಯ ಸಹೋದರನ ಪುತ್ರ
ಚಂದ್ರಶೇಖರ್ ಕಾರು, ಅದರೊಂದಿಗೆ ಮೃತದೇಹ ತುಂಗಾ
ನದಿಯ ಕಾಲುವೆಯಲ್ಲಿ ಪತ್ತೆಯಾಗಿದೆ.