ರಾಜ್ಯ
500 ಕೋಟಿ ರೂ. ಪ್ಯಾಕೇಜ್ ಘೋಷಣೆ

ಬೆಂಗಳೂರು: ಜೂ.7 ರಿಂದ ಮತ್ತೆ ಒಂದು ವಾರ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ ಎಂದು ಹೇಳಿದ ಸಿಎಂ ಯಡಿಯೂರಪ್ಪ 500 ಕೋಟಿ ರೂ. ಪರಿಹಾರ ಪ್ಯಾಕೇಜ್ ಘೋಷಣೆ ಮಾಡಿದರು.
ಅಂಗನವಾಡಿ ಕಾರ್ಯಕರ್ತರು, ಕಲಾವಿದರು, ಮೀನುಗಾರರು, ಅರ್ಚಕರು, ಅಡುಗೆ ಕೆಲಸಗಾರರಿಗೆ 3 ಸಾವಿರ ಪರಿಹಾರ ನೀಡಲಾಗುವುದು ಎಂದು ಹೇಳಿದರು.
ಅನುದಾನ ರಹಿತ ಖಾಸಗಿ ಶಾಲಾ ಶಿಕ್ಷಕರಿಗೆ 5 ಸಾವಿರ ರೂ. ಮಗ್ಗ ಕಾರ್ಮಿಕರಿಗೆ 3 ಸಾವಿರ ಪರಿಹಾರ ನೀಡಲಾಗುತ್ತದೆ.
Msme ಕೈಗಾರಿಕೆಗಳಿಗೆ ವಿದ್ಯುತ್ ಬಿಲ್ ಪಾವತಿ ದಿನಾಂಕ ಮುಂದೂಡಲಾಗಿದೆ.ಇದರಿಂದ 3 ಲಕ್ಷ ಕೈಗಾರಿಕೆಗಳಿಗೆ ಅನುಕೂಲವಾಗಲಿದೆ ಎಂದರು.