
ಮಣಿಪಾಲ ನ. 25: ಮಣಿಪಾಲದ ಕೈಗಾರಿಕಾ ಪ್ರದೇಶದಲ್ಲಿ ನಿರ್ಮಿಸಲಾದ ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತ ಮಣಿಪಾಲ ಉಪವಿಭಾಗದ ನೂತನ ಕಟ್ಟಡವನ್ನು ಇಂದು ಶಾಸಕ ಶ್ರೀ ಕೆ. ರಘುಪತಿ ಭಟ್ ಅವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ರಾದ ದಿನಕರ್ ಬಾಬು, ನಗರಸಭೆ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ಸ್ಥಳೀಯ ನಗರಸಭಾ ಸದಸ್ಯರಾದ ಕಲ್ಪನಾ ಸುಧಾಮ ಹಾಗೂ ಮೆಸ್ಕಾಂ ಅಧೀಕ್ಷಕ ಅಭಿಯಂತರರಾದ ನರಸಿಂಹ ಪಂಡಿತ್, ಕಾರ್ಯಪಾಲಕ ಅಭಿಯಂತರರಾದ ದಿನೇಶ್ ಉಪಾಧ್ಯಾಯ, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಪ್ರಶಾಂತ್ ಪುತ್ರನ್ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.