ಬ್ರಹ್ಮಾವರ : ಫ್ಲ್ಯಾಟ್ ನಲ್ಲಿ ಮಹಿಳೆಯ ಹತ್ಯೆ!!

ಬ್ರಹ್ಮಾವರ : ಫ್ಲ್ಯಾಟ್ ನಲ್ಲಿ ವಾಸವಾಗಿದ್ದ ಮಳೆಯನ್ನು ಹತ್ಯೆ ಮಾಡಿ ದುಷ್ಕರ್ಮಿಗಳು ಮನೆಯಲ್ಲಿದ್ದ ಚಿನ್ನಾಭರಣಗಳನ್ನು ದೋಚಿ ಪರಾರಿಯಾದ ಘಟನೆ ಬ್ರಹ್ಮಾವರ ಸಮೀಪದ ಉಪ್ಪಿನಕೋಟೆಯಲ್ಲಿ ನಡೆದಿದೆ.
ವಿಶಾಲ ಗಾಣಿಗ ( 35 ವರ್ಷ) ಎಂಬವರೇ ಕೊಲೆಯಾದ ಮಹಿಳೆ. ವಿಶಾಲ ಗಾಣಿಗ ಅವರ ಪತಿ ವಿದೇಶದಲ್ಲಿದ್ದು, ಗಂಗೊಳ್ಳಿ ಮೂಲದ ವಿಶಾಲ ಅವರು ಇತ್ತೀಚಿಗಷ್ಟೇ ಊರಿಗೆ ಮರಳಿದ್ದರು. ಬ್ರಹ್ಮಾವರದಲ್ಲಿ ಸ್ವಲ್ಪ ಕೆಲಸವಿದೆ ಮುಗಿಸಿ ಬರುತ್ತೇನೆ ಎಂದು ಮನೆಯಲ್ಲಿ ಹೇಳಿಬಂದಿದ್ದ ವಿಶಾಲ ಅವರು ಮನೆಗೆ ವಾಪಾಸಾಗಿರಲಿಲ್ಲ. ಜುಲೈ 11 ರಂದು ರಾತ್ರಿ ಮನೆಯಲ್ಲಿ ಇಬ್ಬರೇ ಇದ್ದ ವೇಳೆಯಲ್ಲಿ ಫ್ಲ್ಯಾಟ್ ಪ್ರವೇಶಿಸಿ ಈ ಕೃತ್ಯವೆಸಗಿರಬಹುದು ಎಂದು ಶಂಕಿಸಲಾಗುತ್ತಿದೆ. ಮನೆ ಮಗಳು ವಾಪಾಸಾಗದ ಹಿನ್ನೆಲೆಯಲ್ಲಿ ಹುಡುಕಿಬಂದಾಗ ಜುಲೈ 12ರಂದು ಸಂಜೆಯ ವೇಳೆಗೆ ಕೊಲೆ ಪ್ರಕರಣ ಬಯಲಿಗೆ ಬಂದಿದೆ. ಮಹಿಳೆಯನ್ನು ಕೊಲೆ ಮಾಡಿದ ನಂತರ ದುಷ್ಕರ್ಮಿಗಳು ಮನೆಯಲ್ಲಿದ್ದ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ.
ಸ್ಥಳಕ್ಕೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಹೆಚ್ಚುವರಿ ಎಸ್ಪಿ ಕುಮಾರಚಂದ್ರ ಅವರು ಆಗಮಿಸಿ ಪರಿಶೀಲನೆಯನ್ನು ನಡೆಸಿದ್ದಾರೆ. ಫ್ಲ್ಯಾಟ್ ನಲ್ಲಿರುವ ಭದ್ರತೆಯ ಕುರಿತು ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. ಅಲ್ಲದೇ ಸಿಸಿ ಕ್ಯಾಮರಾ ದೃಶ್ಯಾವಳಿ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಘಟನೆ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ