ರಾಷ್ಟ್ರೀಯ

ಮುಂಬೈನಲ್ಲಿ ಧಾರಾಕಾರ ಮಳೆ: ವಾಹನ, ಜನಸಂಚಾರಕ್ಕೆ ಅಡಚಣೆ

ಮುಂಬೈ(09.06.2021): ಮಹಾರಾಷ್ಟ್ರದಲ್ಲಿ ಬುಧವಾರ ಮುಂಜಾನೆಯಿಂದಲೇ ಧಾರಾಕಾರ ಮಳೆಯಾಗುತ್ತಿದ್ದು, ರಸ್ತೆಗಳು ಜಲಾವೃತವಾಗಿವೆ. ಈ ಹಿನ್ನೆಲೆ ವಾಹನ, ಜನಸಂಚಾರಕ್ಕೆ ತುಂಬಾ ಅಡಚಣೆಯುಂಟಾಗಿದೆ.

ಸಿಯೊನ್ ರೈಲ್ವೆ ನಿಲ್ದಾಣ ಮತ್ತು ಜಿಟಿಬಿ ನಗರ ರೈಲ್ವೆ ನಿಲ್ದಾಣದ ಮಧ್ಯೆ ರೈಲ್ವೆ ಹಳಿಗಳು ಮುಳುಗಿಹೋಗಿವೆ. ಮಳೆಯಿಂದಾಗಿ ಮುಂಬೈಯ ಕಿಂಗ್ಸ್ ಸರ್ಕಲ್​ನಲ್ಲಿ ಹಲವು ಕಡೆ ವಾಹನಗಳು ಮುಳುಗಿವೆ.

 

ಮುಂದಿನ ನಾಲ್ಕೈದು ದಿನಗಳವರೆಗೆ ಮುಂಬೈಯಲ್ಲಿ ಧಾರಾಕಾರ ಮಳೆ ಸುರಿಯಬಹುದು ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!