ರಾಜ್ಯ

ಜನರು ಮೈಮರೆತ್ರೆ ಮತ್ತೊಮ್ಮೆ ಲಾಕ್ ಡೌನ್? ಸಿಎಂ ಬಿಎಸ್ ವೈ ಖಡಕ್ ಎಚ್ಚರಿಕೆ!!

ಬೆಂಗಳೂರು: ಕೊರೊನಾ ವೈರಸ್‌ ಸೋಂಕು ಲಾಕ್‌ ಡೌನ್‌ ಬೆನ್ನಲ್ಲೇ ಏರಿಕೆಯಾಗುತ್ತಿದೆ. ಒಂದೊಮ್ಮೆ ಜನರು ಕೊರೊನಾ ಮಾರ್ಗಸೂಚಿಯನ್ನು ಪಾಲನೆ ಮಾಡದಿದ್ರೆ 15 ದಿನಗಳ ನಂತರ ವಿನಾಯಿತಿಯನ್ನ ರದ್ದುಪಡಿಸಿ, ಲಾಕ್‌ ಡೌನ್‌ ಹೇರಿಕೆ ಮಾಡಲಾಗುವುದು ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆಯನ್ನು ನೀಡಿದ್ದಾರೆ.

ರಾಜ್ಯದಲ್ಲಿ ಕೊರೊನಾ ವೈರಸ್‌ ಸೋಂಕು ಕಡಿಮೆಯಾದ ಬೆನ್ನಲ್ಲೇ ರಾಜ್ಯ ಸರಕಾರ ಲಾಕ್‌ ಡೌನ್‌ ಅನ್ನು ಹಂತ ಹಂತವಾಗಿ ತೆರವು ಮಾಡಲಾಗಿತ್ತು. ಅಲ್ಲದೇ ಜುಲೈ 3ರಿಂದ ಜುಲೈ 19ರವರೆಗೆ ಅನ್‍ಲಾಕ್ ಜಾರಿ ಮಾಡಲಾಗಿತ್ತು. ಆದರೆ ಅನ್‌ ಲಾಕ್‌ ಆದೇಶ ಜಾರಿಯಾದ ಬೆನ್ನಲ್ಲೇ ಕೆಲವು ಜಿಲ್ಲೆಗಳಲ್ಲಿ ಕೊರೊನಾ ವೈರಸ್‌ ಸೋಂಕು ಏರಿಕೆಯಾಗುತ್ತಿದೆ. ಅಲ್ಲದೇ ಜನರು ಮಾಸ್ಕ್‌, ಸಾಮಾಜಿಕ ಅಂತರವನ್ನು ಮರೆಯುತ್ತಿದ್ದಾರೆ. ಇದರಿಂದಾಗಿ ಸೋಂಕು ಏರಿಕೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಅವರು ನೀಡಿರುವ ಹೇಳಿಕೆ ಮಹತ್ವವನ್ನು ಪಡೆದುಕೊಂಡಿದೆ.

Leave a Reply

Your email address will not be published. Required fields are marked *

Back to top button
error: Content is protected !!

Adblock Detected

Please consider supporting us by disabling your ad blocker