ರಾಜ್ಯ

ಪಿಜಿಯಲ್ಲಿರುವ ವಿದ್ಯಾರ್ಥಿಗಳು ಮನೆಗೆ ತೆರಳಲು ಬಿಬಿಎಂಪಿ ಸೂಚನೆ

ಬೆಂಗಳೂರು: ಈಗಾಗಲೇ ಲಾಕ್‌ಡೌನ್‌ ಜಾರಿಯಾಗಿ ತಿಂಗಳುಗಳು ಕಳೆಯುತ್ತಿವೆ. ಕೋವಿಡ್‌ ಹೊಸ ಪ್ರಕರಣಗಳ ಹರಡುವಿಕೆ ಕಡಿಮೆಯಾಗುದ್ದು, ಬೆಂಗಳೂರಿನಲ್ಲಿಯೂ ನಿಯಂತ್ರಣಕ್ಕೆ ಬರುತ್ತಿದೆ. ಇದೇ ಸಂದರ್ಭದಲ್ಲಿ ಲಾಕ್‌ಡೌನ್‌ ಸಡಿಲಿಕೆ ಮೊದಲ ಹಂತದ ಪ್ರಕ್ರಿಯೆ ನೆನ್ನೆಯಿಂದ ಆರಂಭವಾಗಿದೆ.

ಆದರೆ, ಇದೇ ಸಂದರ್ಭದಲ್ಲಿ  ಬೆಂಗಳೂರಿನ ಪಿಜಿಗಳಲ್ಲಿ ವಾಸವಾಗಿರುವ ವಿದ್ಯಾರ್ಥಿಗಳನ್ನು ಕೂಡಲೇ ಖಾಲಿ ಮಾಡಿ ಅವರವರ ಊರುಗಳಿಗೆ ತೆರಳುವಂತೆ ಆದೇಶಿಸಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಸೂಚನಾ ಪತ್ರ ಹೊರಡಿಸಿದ್ದು, ಕಾಲೇಜುಗಳು ರಜೆ ಇರುವ ವಿದ್ಯಾರ್ಥಿಗಳು ಪಿಜಿಯಲ್ಲಿ ಉಳಿಯುವ ಅವಕಾಶವಿಲ್ಲವೆಂದು ವಿವರಿಸಿದ್ದಾರೆ.

ಒಂದು ವೇಳೆ ಅನಿವಾರ್ಯ ಕಾರಣಗಳಿಗಿಂದಾಗಿ ವಿದ್ಯಾರ್ಥಿಗಳನ್ನು ಪಿಜಿಯಲ್ಲಿ ಉಳಿಸಿಕೊಂಡಲ್ಲಿ ಪಿಜಿಯಲ್ಲಿ ವೈಯಕ್ತಿಕ ಆರೋಗ್ಯ ಮತ್ತು ಸ್ವಚ್ಛತೆಯ ಜವಾಬ್ದಾರಿ ಅವರದ್ದೇ ಆಗಿರುತ್ತದೆ. 110 ಚದುರ ಅಡಿಯ ಕೊಠಡಿಯಲ್ಲಿ ಇಬ್ಬರಿಗಿಂತ ಹೆಚ್ಚು ಜನರಿಗೆ ಅವಕಾಶವಿಲ್ಲ. ಪಿಜಿಯ ಸ್ವಚ್ಛತೆಯ ಹೊಣೆಯನ್ನು ಪಿಜಿ ಮಾಲೀಕರೇ ಹೊರಬೇಕು.

ಪಿಜಿ ವಾಸಿಗಳನ್ನು ಯಾವುದೇ ಮುನ್ಸೂಚನೆ ಇಲ್ಲದ ದಿಢೀರ್ ಎಂದು ಹೊರ ಹಾಕುವಂತಿಲ್ಲ. ಪಿಜಿ ಮಾಲೀಕರ ನಿರ್ಲಕ್ಷ್ಯದಿಂದ ಕೋವಿಡ್ ಹರಡುವಿಕೆ ಕಂಡಲ್ಲಿ ಕಠಿಣ ಕ್ರಮ ಎಂದು ಬಿಬಿಎಂಪಿ ಮುಖ್ಯ ಆಯುಕ್ತರು ಆದೇಶಿಸಿದ್ದಾರೆ.

ರಾಜ್ಯದಲ್ಲಿ ಜೂನ್ 21ರಿಂದ ಎರಡನೇ ಹಂತದ ಅನ್‌ಲಾಕ್ ಪ್ರಕ್ರಿಯೆ ಶುರುವಾಗಲಿದೆ. ಈಗಾಗಲೇ 11 ಜಿಲ್ಲೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ಜಿಲ್ಲೆಗಳಲ್ಲಿ ಲಾಕ್‌ಡೌನ್ ಸಡಿಲಗೊಂಡಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!