ತಾಜಾ ಸುದ್ದಿಗಳು

ಕೇರಳದಿಂದ ದಕ್ಷಿಣ ಕನ್ನಡ ಪ್ರವೇಶಿಸಲು ಆರ್‌ಟಿಪಿಸಿಆರ್ ನೆಗೆಟಿವ್ ಕಡ್ಡಾಯ: ಡಾ. ರಾಜೇಂದ್ರ ಕೆ.ವಿ ಆದೇಶ

ಮಂಗಳೂರು: ಕೇರಳಿಗರು ದಕ್ಷಿಣಕನ್ನಡ ಪ್ರವೇಶಿಸಬೇಕಾದರೆ ಕಡ್ಡಾಯವಾಗಿ ಆರ್‌ಟಿಪಿಸಿಆರ್ ನೆಗೆಟಿವ್ ವರದಿ ಹೊಂದಿರಬೇಕೆಂದು ದ.ಕ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ ವಿ ಆದೇಶಿದ್ದಾರೆ.

ಕೇರಳ ಭಾಗದಲ್ಲಿ ಕೋವಿಡ್ ಪ್ರಕರಣ ಹೆಚ್ಚಾಗುತ್ತಿರುವುದರೊಂದಿಗೆ ಡೆಲ್ಟಾ ಸೋಂಕು ಹರಡುವ ಹಿನ್ನೆಲೆಯಲ್ಲಿ ಕೇರಳ ಗಡಿ ಭಾಗ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಬೇಕೆಂದು ರಾಜ್ಯ ಸರ್ಕಾರದ ನಿರ್ದೇಶನ ಆಧಾರದಲ್ಲಿ ಅವರು ಸೂಚಿಸಿದ್ದಾರೆ.

ಇನ್ನೂ ಕಾಸರಗೋಡು ಮಂಗಳೂರು ಸಂಚಾರ ಹೆಚ್ಚಿರುವ ಹಿನ್ನೆಲೆಯಲ್ಲಿ ತಲಪಾಡಿ, ನೆಟ್ಟನಿಕೆ ಮುನ್ನೂರು, ಸಾರಡ್ಕ, ಜಾಲ್ಸೂರ್ ಚೆಕ್ ಪೋಸ್ಟ್ ನಲ್ಲಿ ಭದ್ರತೆಯನ್ನು ಬಿಗಿಗೊಳಿಸಿ ಇನ್ನಿತರ ಗ್ರಾಮಗಳಲ್ಲಿ ಜನ ಸಂಚಾರವಿರುವಲ್ಲಿ ಹೆಚ್ಚಿನ ಚೆಕ್ ಪೋಸ್ಟ್ ನಿರ್ಮಸಿ ಕೇರಳ ದ.ಕ ಜಿಲ್ಲೆ ಗಡಿ ಪ್ರದೇಶದ ಚೆಕ್ ಪೋಸ್ಟ್ ಗಳಲ್ಲಿ ಆರ್‌ಟಿಪಿಸಿಆರ್ ಟೆಸ್ಟ್ ವ್ಯವಸ್ಥೆ ಮಾಡಬೇಕೆಂದು ಆದೇಶಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!