ತಾಜಾ ಸುದ್ದಿಗಳು

ಅತಿಯಾಗಿ ಮೊಬೈಲ್ ಬಳಕೆ ಮಾಡುತ್ತಿದ್ದ ಸಹೋದರಿಯನ್ನು ಕೊಲೆಗೈದ ಅಣ್ಣ..!

ತಮಿಳುನಾಡು: ಅತಿಯಾದ ಮೊಬೈಲ್​ ಬಳಕೆ ಮಾಡ್ತಿದ್ದ ಸಹೋದರಿಯನ್ನ ಅಣ್ಣನೊಬ್ಬ ಕೊಲೆ ಮಾಡಿರುವ ಘಟನೆ ತೂತುಕುಡಿಯ ವಾಸವಪ್ಪಪುರಂ ಗ್ರಾಮದಲ್ಲಿ ನಡೆದಿದೆ.

ಕವಿತಾ(17) ಅಣ್ಣನಿಂದಲೇ ಮೃತಪಟ್ಟ ದುರ್ದೈವಿ. ಕಳೆದ ಕೆಲ ತಿಂಗಳಿಂದ ಕವಿತಾ ಮಲೈರಾಜ್ ಮೊಬೈಲ್​​ನಲ್ಲಿ ಫೇಸ್​ಬುಕ್​, ವಾಟ್ಸ್​​​ಆ್ಯಪ್​ ಬಳಕೆ ಮಾಡುತ್ತಿದ್ದಳು. ಹಾಗೂ ರಾತ್ರಿಯಿಡೀ ಗೇಮ್​ ಆಡುತ್ತಿದ್ದಳು. ಇದರಿಂದ ಆಕ್ರೋಶಗೊಂಡ ಆಕೆಯ ಅಣ್ಣ ಮಲೈರಾಜ ಇನ್ನು ಮುಂದೆ ಮೊಬೈಲ್ ಬಳಕೆ ಮಾಡದಂತೆ ಎಚ್ಚರಿಕೆ ನೀಡಿದ್ದನು.

ಅಣ್ಣನ ಮಾತು ಕೇಳದ ಕವಿತಾ ತನ್ನ ಕೆಲಸ ಮುಂದುವರೆಸಿದ್ದಳು. ನಿನ್ನೆ ಸಂಜೆ ಈ ವಿಚಾರದ ಬಗ್ಗೆ ಇಬ್ಬರ ನಡುವೆ ವಾಗ್ವಾದ ನಡೆದಿದೆ. ಕುಪಿತಗೊಂಡಿರುವ ಮಲೈರಾಜ ಕುಡುಗೋಲಿನಿಂದ ಸಹೋದರಿ ಮೇಲೆ ಹಲ್ಲೆ ನಡೆಸಿದ್ದಾನೆ.

ಪರಿಣಾಮ ತೀವ್ರ ರಕ್ತಸ್ರಾವವಾಗಿ ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ಮಲೈರಾಜನನ್ನ ಬಂಧನ ಮಾಡಿ, ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

Back to top button
error: Content is protected !!

Adblock Detected

Please consider supporting us by disabling your ad blocker