ಕರಾವಳಿ

ನೀಲಾವರ ಗ್ರಾಮದ ಹಡಿಲು ಭೂಮಿ ಕೃಷಿ ನಾಟಿಗೆ ಚಾಲನೆ

ರಾಷ್ಟ್ರದ ಗಮನ ಸೆಳೆದ ಉಡುಪಿಯಲ್ಲಿ ಹಮ್ಮಿಕೊಂಡ “ಹಡಿಲು ಭೂಮಿ ಕೃಷಿ ಅಂದೋಲನ”ದಡಿ ನೀಲಾವರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೇದಾರೋತ್ಥಾನ ಟ್ರಸ್ಟ್ ವತಿಯಿಂದ ಸುಮಾರು 19 ಎಕರೆ ಹಡಿಲು ಭೂಮಿ ಸಾವಯವ ಕೃಷಿ ಮಾಡಲಾಗುತ್ತಿದ್ದು, ಇಂದು ದಿನಾಂಕ 23-07-2021 ರಂದು ನೀಲಾವರ ಕಳುವಿನ ಬೆಟ್ಟು ಬಳಿಯ ಹಡಿಲು ಭೂಮಿ ಕೃಷಿ ನಾಟಿ ಕಾರ್ಯಕ್ಕೆ ಚಾಲನೆ ನೀಡಲಾಯಿತು.

ಶ್ರೀ ಕಲ್ಲಡ್ಕ ಪ್ರಭಾಕರ್ ಭಟ್ ರಾಷ್ಟ್ರೀಯ ಸ್ವಯಂಸೇವಕ ಸಂಘ ದಕ್ಷಿಣ ಮಧ್ಯ ಕ್ಷೇತ್ರಿಯ ಕಾರ್ಯಕಾರಿಣಿ ಸದಸ್ಯರು, ಶ್ರೀ ಬಿ.ಎಂ ಸುಕುಮಾರ್ ಶೆಟ್ಟಿ ಶಾಸಕರು ಬೈಂದೂರು ವಿಧಾನಸಭಾ ಕ್ಷೇತ್ರ, ಶ್ರೀ ಎನ್. ರಘುರಾಮ ಮಧ್ಯಸ್ಥ ಅಧ್ಯಕ್ಷರು ಅಭಿವೃದ್ಧಿ ಸಮಿತಿ ಶ್ರೀ ಮಹಿಷಮರ್ದಿನಿ ದೇವಸ್ಥಾನ, ನೀಲಾವರ, ಶ್ರೀ ವಿಶ್ವನಾಥ್ ಸನಿಲ್ ವ್ಯವಸ್ಥಾಪಕ ನಿರ್ದೇಶಕರು ಜೆನಿತ್ ಡೈ ಮೇಕರ್ಸ್ ಪ್ರೈ. ಲಿ, ನೀಲಾವರ ಇವರೊಂದಿಗೆ ಶಾಸಕ ಶ್ರೀ ಕೆ. ರಘುಪತಿ ಭಟ್ ಅವರು ಭೂ ಮಾತೆಗೆ ಹಾಲನ್ನು ಅರ್ಪಿಸಿ ನೇಜಿ ನೀಡುವ ಮೂಲಕ ಯಂತ್ರ ನಾಟಿ ಕಾರ್ಯಕ್ಕೆ ಚಾಲನೆ ನೀಡಿದರು.

ಈ ಭಾಗದಲ್ಲಿ ಹಡಿಲು ಭೂಮಿ ಕೃಷಿ ಆಂದೋಲನಕ್ಕೆ ಸಹಕರಿಸಿ ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಸಂಘ – ಸಂಸ್ಥೆಯವರಿಗೆ, ಭೂ ಮಾಲಕರಿಗೆ, ಸ್ಥಳೀಯರಿಗೆ ಶಾಸಕ ಶ್ರೀ ಕೆ. ರಘುಪತಿ ಭಟ್ ಅವರು ಕೃತಜ್ಞತೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ನೀಲಾವರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಹೇಂದ್ರ ಕುಮಾರ್, ಬಿಜೆಪಿ ರಾಜ್ಯ ಎಸ್. ಟಿ ಮೋರ್ಚಾದ ಕಾರ್ಯದರ್ಶಿಗಳಾದ ಉಮೇಶ್ ನಾಯ್ಕ್, ನೀಲಾವರ ಗ್ರಾಮ ಪಂಚಾಯತ್ ಸದಸ್ಯರಾದ ರಮೇಶ್ ಪೂಜಾರಿ, ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಶೀಲಾ ಕೆ. ಶೆಟ್ಟಿ, ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ನಳಿನಿ ಪ್ರದೀಪ್ ರಾವ್, ಪಕ್ಷದ ಮುಖಂಡರಾದ ಧನಂಜಯ್ ಅಮೀನ್, ನೀಲಾವರ ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಪ್ರಧಾನ ಅರ್ಚಕರಾದ ರಾಘವೇಂದ್ರ ಅಡಿಗ, ಕೇದಾರೋತ್ಥಾನ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿಗಳಾದ ಮುರಳಿ ಕಡೆಕಾರ್, ಕೋಶಾಧಿಕಾರಿಗಳಾದ ರಾಘವೇಂದ್ರ ಕಿಣಿ, ಸದಸ್ಯರಾದ ಬಿರ್ತಿ ರಾಜೇಶ್ ಶೆಟ್ಟಿ, ಪ್ರತಾಪ್ ಹೆಗ್ಡೆ ಮಾರಾಳಿ, ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಶಿವಮೊಗ್ಗ ಮತ್ತು ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಬ್ರಹ್ಮಾವರದ ಹಿರಿಯ ಕ್ಷೇತ್ರ ಅಧಿಕಾರಿಗಳಾದ ಶಂಕರ್, ನೀಲಾವರ ಗ್ರಾಮ ಪಂಚಾಯತ್ ಸರ್ವ ಸದಸ್ಯರು, ಸ್ಥಳೀಯ ಸಂಘ ಸಂಸ್ಥೆಯ ಸದಸ್ಯರು, ಭೂ ಮಾಲಕರು, ಕೃಷಿಕರು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Back to top button
error: Content is protected !!

Adblock Detected

Please consider supporting us by disabling your ad blocker