ಕರಾವಳಿ

ಝೀಕಾ ವೈರಸ್ ಕೇರಳದಲ್ಲಿ ಪತ್ತೆ । ದಕ್ಷಿಣ ಕನ್ನಡ ,ಉಡುಪಿ ಸಹಿತ ಗಡಿ ಪ್ರದೇಶಗಳಲ್ಲಿ ಕಟ್ಟೆಚ್ಚರ!!!

ನೆರೆ ರಾಜ್ಯ ಕೇರಳದಲ್ಲಿ ಸೊಳ್ಳೆಯಿಂದ ತಗಲುವ  ಝೀಕಾ ವೈರಸ್ ಪತ್ತೆಯಾಗಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಸೇರಿದಂತೆ ಚಾಮರಾಜನಗರ ಹಾಗೂ ಕರ್ನಾಟಕ ಕೇರಳ ಗಡಿ ಪ್ರದೇಶದಲ್ಲಿ ಎಚ್ಚರಿಕೆ ವಹಿಸುವಂತೆ ರಾಜ್ಯ ಆರೋಗ್ಯ ಇಲಾಖೆಯ ಆಯುಕ್ತರು ಸೂಚನೆ ನೀಡಿದ್ದಾರೆ.

ಕೇರಳದಲ್ಲಿ ವೈರಸ್ ಪತ್ತೆಯಾಗಿರುವ ಹಿನ್ನಲೆಯಲ್ಲಿ ದ.ಕ. ಜಿಲ್ಲೆಯಲ್ಲಿ ಈಡಿಸ್‌ ರೋಗವಾಹಕ ಸೊಳ್ಳೆಗಳ ನಿಯಂತ್ರಣಕ್ಕೆ ನಿಗಾ ವಹಿಸಲು ಆರೋಗ್ಯ ಇಲಾಖೆಗೆ ಸೂಚನೆ ನೀಡಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.

ರಾಜ್ಯದ ಆರೋಗ್ಯ ಆಯುಕ್ತರಿಂದ ಝೀಕಾ ವೈರಸ್‌ಗೆ ಕಾರಣವಾಗುವ ಸೊಳ್ಳೆಗಳ ನಿಯಂತ್ರಣ ಕ್ರಮ  ಬಂದಿವೆ. ಅದರ ಜತೆಗೆ ಜಿಲ್ಲೆಯಲ್ಲಿ ಈ ಕುರಿತಂತೆ ತೀವ್ರ ರೀತಿಯ ಜಾಗೃತಿಗೆ ಆರೋಗ್ಯಾಧಿಕಾರಿಗಳಿಗೆ ಈಗಾಗಲೇ ನಿರ್ದೇಶನ ನೀಡಲಾಗಿದೆ. ರೋಗಿಗಳಲ್ಲಿ ಈ ರೋಗದ   ಕುರಿತಂತೆ ವೈದ್ಯರಿಗೆ ಯಾವುದೇ ರೀತಿಯ ಸಂಶಯ ಬಂದಾಗಲೂ ಸೂಕ್ತ ತಪಾಸಣೆ ನಡೆಸುವಂತೆ ಸೂಚನೆ ನೀಡಲಾಗಿದೆ’’ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಹೇಳಿದ್ದಾರೆ.

ಕೇರಳದಿಂದ ದ.ಕ. ಜಿಲ್ಲೆಗೆ ಆಗಮಿಸುವವರ ತಪಾಸಣೆಗೆ ಸಂಬಂಧಿಸಿ ಈಗಾಗಲೇ ಆರ್‌ಟಿ-ಪಿಸಿಆರ್ ನೆಗೆಟಿವ್ ವರದಿ ಅಥವಾ ಕೋವಿಡ್ ಲಸಿಕಾ ಪ್ರಮಾಣ ಪತ್ರವನ್ನು ಕಡ್ಡಾಯಗೊಳಿಸಿಲಾಗಿದೆ. ಉಳಿದಂತೆ ಝೀಕಾಕ್ಕೆ ಸಂಬಂಧಿಸಿ ಹೊಸ ಮಾರ್ಗಸೂಚಿಯೇನೂ ಇಲ್ಲ. ಸೊಳ್ಳೆಗಳಿಂದ ಈ ವೈರಸ್ ಹರಡುವುದರಿಂದ ರಾಜ್ಯದಿಂದ ಬರುವ ಎಲ್ಲಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ. ಪಾಲಿಸತಕ್ಕದ್ದು  ಈ ಝೀಕಾ ವೈರಸ್‌ನ ಗುಣಲಕ್ಷಣಗಳನ್ನು ಪತ್ತೆಹಚ್ಚುವುದು ಕ್ಲಿನಿಕಲ್ ಆಧಾರದಲ್ಲಿ ಮಾಡಬೇಕಾಗುತ್ತದೆ. ಈ ಬಗ್ಗೆ ಯಾವುದೇ ಗಾಬರಿ ಬೇಡ. ಗಡಿಗಳಲ್ಲಿ ಈ ಬಗ್ಗೆ ಇನ್ನೂ ಹೆಚ್ಚಿನ ರೀತಿಯ ಯಾವ ತಾಂತ್ರಿಕ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದನ್ನು ಪರಿಶೀಲಿಸಲಾಗುವುದು’’ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Back to top button
error: Content is protected !!

Adblock Detected

Please consider supporting us by disabling your ad blocker