ಕರಾವಳಿ

ಕೊರೋನಾದಿಂದ ಮೃತಪಟ್ಟವರ ಸಾಲ ಮನ್ನಾ !!

ಮಂಗಳೂರು : ಬೈಕಂಪಾಡಿಯಲ್ಲಿ ಹಣ್ಣು ತರಕಾರಿ ಮಾರಾಟ ದ ಸ್ಮಾರ್ಟ್ ಕಟ್ಟಡ ನಿರ್ಮಾಣಕ್ಕೆ ಶಿಲಾನ್ಯಾಸವನ್ನು ಸಹಕಾರ ಸಚಿವ ಎಸ್.ಟಿ ಸೋಮಶೇಖರ್ ನೆರವೇರಿಸಿದರು.

ನಂತರ ಮಾತನಾಡಿದ ಸಹಕಾರ ಸಚಿವ ಎಸ್.ಟಿ ಸೋಮಶೇಖರ್, ಕೊರೋನಾಗೆ ಬಲಿಯಾಗಿರುವ ಜನರು ಅಪೆಕ್ಸ್ ಮತ್ತು ಡಿಸಿಸಿ ಬ್ಯಾಂಕ್ ಗಳಲ್ಲಿ ಮಾಡಿರುವ ಸಾಲವನ್ನು ಮನ್ನಾ ಮಾಡಲು ಸರಕಾರ ಮುಂದಾಗಿದೆ. ಇದಕ್ಕೆ ಒಟ್ಟು 81 ಕೋಟಿ ರೂಪಾಯಿಗಳ ಅವಶ್ಯಕತೆಯಿದೆ. ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ತೀರ್ಮಾನ ಮಾಡಲಾಗುವುದು ಎಂದು ಹೇಳಿದ್ದಾರೆ.
ಡಿಸಿಸಿ ಬ್ಯಾಂಕ್ಗಳ ಲಾಭ ನಷ್ಟ ಲೆಕ್ಕಾಚಾರವನ್ನು ಈ ವಿಚಾರದಲ್ಲಿ ಪರಿಗಣನೆಗೆ ತೆಗೆದುಕೊಳ್ಳ ಬೇಕಾಗುತ್ತದೆ ಎಂದರು. ಕೇಂದ್ರ ಸರಕಾರ ಸಹಕಾರ ಸಚಿವಾಲಯ ಆರಂಭಿಸಿದ್ದು 1 ಲಕ್ಷ ಕೋಟಿ ಬಜೆಟ್ ನೀಡಿದೆ. ಇದರಿಂದ ಎಪಿಎಂಸಿಗಳ ಬಲವರ್ಧನೆ ಸಾಧ್ಯವಾಗಲಿದೆ. ಮಂಗಳೂರು ಎಪಿಎಂಸಿಯನ್ನು ಮಾದರಿಯಾಗಿ ಮಾಡಲು ಎಲ್ಲಾ ಕಾರ್ಯಯೋಜನೆ ರೂಪಿಸಲಾಗುವುದು ಎಂದು ಭರವಸೆಯನ್ನು ನೀಡಿದರು.

ಈ ಕಾರ್ಯಕ್ರಮದಲ್ಲಿ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಉಮಾನಾಥ ಕೋಟ್ಯಾನ್, ವೇದವ್ಯಾಸ ಕಾಮತ್, ಭರತ್ ಶೆಟ್ಟಿ ವೈ, ಮೇಯರ್ ಪ್ರೇಮಾನಂದ ಶೆಟ್ಟಿ ಎಪಿಎಂಸಿ ಅಧ್ಯಕ್ಷ ಕೃಷ್ಣರಾಜ ಹೆಗ್ಡೆ, ಉಪಾಧ್ಯಕ್ಷೆ ರಜನೀ ದುಗ್ಗಣ್ಣ, ಸಮಿತಿ ಸದಸ್ಯರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Back to top button
error: Content is protected !!

Adblock Detected

Please consider supporting us by disabling your ad blocker