ರಾಜ್ಯ

ಇಂದಿನಿಂದ ಭಕ್ತರಿಗೆ ಶಬರಿಮಲೆ ಅಯ್ಯಪ್ಪನ ದರ್ಶನ ಜುಲೈ 21 ರವರೆಗೆ ಸೀಮಿತ ದರ್ಶನಕ್ಕೆ ಅವಕಾಶ

ಶಬರಿಮಲೆ : ಧರ್ಮಶಾಸ್ತ ಶಬರಿಮಲೆ ಅಯ್ಯಪ್ಪಸ್ವಾಮಿ ಇಂದಿನಿಂದ ಭಕ್ತರಿಗೆ ದರ್ಶನ ನೀಡಲಿದ್ದಾರೆ. ಕೊರೊನಾ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಬಂದ್‌ ಆಗಿದ್ದ ದೇವಸ್ಥಾನ ಭಕ್ತರ ದರ್ಶನಕ್ಕಾಗಿ ತೆರೆಯಲಿದ್ದು, ಭಕ್ತರಿಗೆ ಹಲವು ನಿರ್ಬಂಧಗಳನ್ನು ಹೇರಲಾಗಿದೆ.   ಬಾಗಿಲು, ಇಂದು, ಶನಿವಾರ ನಸುಕಿನ ವೇಳೆ ತೆರೆದಿದ್ದು, ಮುಂಜಾನೆಯಿಂದಲೇ ಭಕ್ತರ ದರ್ಶನಕ್ಕೆ ಮುಕ್ತಗೊಂಡಿದೆ.

ತಿಂಗಳ ಐದು ದಿನಗಳ ಪೂಜೆ ನೆರವೇರಿಸಲು ದೇವಾಲಯದ ಬಾಗಿಲು ತೆರೆಯಲಾಗಿದೆ. ಆನ್‌ಲೈನ್ ಸರದಿಯನ್ನು ಅನುಸರಿಸಿ ದರ್ಶನಕ್ಕೆ ಕೇವಲ 5,000 ಮಂದಿಗೆ ಮಾತ್ರ ಪ್ರವೇಶಾವಕಾಶ ಕಲ್ಪಿಸಲಾಗಿದೆ.

ದೇವಾಲಯವನ್ನು ತಿಂಗಳ ಕೆಲ ನಿರ್ದಿಷ್ಟ ದಿನಗಳಲ್ಲಿ ತೆರೆದರೂ ಕೋವಿಡ್-19 ನಿರ್ಬಂಧಗಳಿಂದಾಗಿ ಭಕ್ತರಿಗೆ ದರ್ಶನಕ್ಕೆ ಅವಕಾಶ ಇರಲಿಲ್ಲ. ಲಾಕ್‌ಡೌನ್ ಅವಧಿಯಲ್ಲಿ ತನ್ನ ಅಧೀನದಲ್ಲಿರುವ 1,200 ದೇವಾಲಯಗಳಿಗೆ ಭಕ್ತರು ಪ್ರವೇಶಿಸದಂತೆ ತಿರುವಾಂಕೂರು ದೇವಸ್ವಂ ಬೋರ್ಡ್ (ಟಿಡಿಬಿ) ನಿರ್ಬಂಧ ವಿಧಿಸಿತ್ತು. ಆದಾಗ್ಯೂ ಧಾರ್ಮಿಕ ವಿಧಿವಿಧಾನಗಳಿಗೆ ಯಾವುದೇ ಧಕ್ಕೆಯಾಗದಂತೆ ನೋಡಿಕೊಂಡಿತ್ತು.

ಇಂದಿನಿಂದ ಆರಂಭವಾಗುವ ಮಾಸಿಕ ಧಾರ್ಮಿಕ ವಿಧಿವಿಧಾನಗಳಲ್ಲಿ ಭಾಗವಹಿಸುವ ಭಕ್ತರಿಗೆ ಅಯ್ಯಪ್ಪ ದೇಗುಲದಲ್ಲಿ ಕಟ್ಟುನಿಟ್ಟಿನ ನಿರ್ಬಂಧಗಳನ್ನು ವಿಧಿಸಲಾಗಿದೆ. ದೇಗುಲ ಆವರಣದಲ್ಲಿ ಕಡ್ಡಾಯ ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ ಮತ್ತು ಸುರಕ್ಷಿತ ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಸೂಕ್ತ ಕೋವಿಡ್ ನಡವಳಿಕೆಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ದೇವಾಲಯ ಆವರಣದಲ್ಲಿ ಭಕ್ತರ ನಡವಳಿಕೆಗೆ ಸಂಬಂಧಿಸಿದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪ್ರತ್ಯೇಕ ಮಾರ್ಗಸೂಚಿ ನೀಡಿವೆ.

Leave a Reply

Your email address will not be published. Required fields are marked *

Back to top button
error: Content is protected !!

Adblock Detected

Please consider supporting us by disabling your ad blocker