ಕರಾವಳಿ

ಬ್ರಹ್ಮಾವರ: ವಿಶಾಲ ಗಾಣಿಗ ಕೊಲೆ ಪ್ರಕರಣ; ಪೊಲೀಸರಿಂದ ಪತಿಯ ವಿಚಾರಣೆ!!

ಉಡುಪಿ: ಬ್ರಹ್ಮಾವರ ಕುಮ್ರಗೋಡು ಫ್ಲ್ಯಾಟ್‌ನಲ್ಲಿ ನಡೆದ ವಿಶಾಲ ಗಾಣಿಗ(35) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಪತ್ತೆಗಾಗಿ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.‌

ಸುಪಾರಿ ಕೊಟ್ಟು ಕೊಲೆ?:
ಸುಪಾರಿ ಕೊಟ್ಟು ವಿಶಾಲ ಗಾಣಿಗ ಅವರನ್ನು ಕೊಲೆಗೈದಿರುವ ಶಂಕೆ ವ್ಯಕ್ತವಾಗಿದ್ದು, ಈ ಹಿನ್ನೆಲೆಯಲ್ಲಿ ಇಬ್ಬರು ಸುಪಾರಿ ಕಿಲ್ಲರ್‌ಗಳನ್ನು ಪೊಲೀಸರು ಹೊರ ರಾಜ್ಯದಲ್ಲಿ ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಈ ನಿಟ್ಟಿನಲ್ಲಿ ತೀವ್ರ ತನಿಖೆ ಮುಂದುವರೆದಿದೆ.

ಪತಿಯ ತೀವ್ರ ವಿಚಾರಣೆ:

ಪತ್ನಿಯ ಕೊಲೆಯ ನಂತರ ದುಬೈಯಿಂದ ಊರಿಗೆ ಬಂದಿದ್ದ ಪತಿ ಬೀಜೂರು ಚಾರುಕೊಡ್ಲು ನಿವಾಸಿ ರಾಮಕೃಷ್ಣ ಅವರನ್ನು ಪೊಲೀಸರು ಈಗಾಗಲೇ ಎರಡ್ಮೂರು ಬಾರಿ ವಿಚಾರಣೆ ನಡೆಸಿದ್ದರು. ಇದೀಗ ಮತ್ತೊಮ್ಮೆ ಸಂಶಯದ ಮೇರೆಗೆ ಕೆಲವೊಂದು ಮಾಹಿತಿಗಾಗಿ ರಾಮಕೃಷ್ಣ ಅವರನ್ನು ಮತ್ತೆ ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಘಟನೆ ವಿವರ:

ಆಸ್ತಿ ಪಾಲಿನ ವಿಚಾರಕ್ಕೆ ಸಂಬಂಧಿಸಿ ದುಬೈಯಿಂದ ಮಗುವಿನೊಂದಿಗೆ ಊರಿಗೆ ಬಂದಿದ್ದ ವಿಶಾಲ ಗಾಣಿಗ ಕುಮ್ರಗೋಡು ಗ್ರಾಮದ ಫ್ಲ್ಯಾಟ್‌ ನಲ್ಲಿ ನೆಲೆಸಿದ್ದರು. ಜು.12ರಂದು ಅವರು ಫ್ಲ್ಯಾಟ್ ನಲ್ಲಿ ಒಬ್ಬರೇ ಇರುವಾಗ ದುಷ್ಕರ್ಮಿಗಳು ಕುತ್ತಿಗೆ ಬಿಗಿದು ಕೊಲೆ ಮಾಡಿದ್ದರು. ಬಳಿಕ ಅವರ ಮೈಮೇಲಿದ್ದ ಚಿನ್ನಾಭರಣಗಳ್ನು ಸುಲಿಗೆ ಮಾಡಿ ಪರಾರಿಯಾಗಿದ್ದರು. ಈ ಬಗ್ಗೆ ಬಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

Back to top button
error: Content is protected !!

Adblock Detected

Please consider supporting us by disabling your ad blocker