ರಾಜ್ಯ
ಭಾರಿ ಮಳೆಯಿಂದಾಗಿ ಶಿರಾಡಿಘಾಟ್ ನಲ್ಲಿ ಭೂಕುಸಿತ – ಸಂಚಾರ ಸ್ಥಗಿತ !

ಭಾರಿ ಮಳೆಯಿಂದಾಗಿ ಶಿರಾಡಿ ಘಾಟ್ ನಲ್ಲಿ ಇಂದು ಭೂಕುಸಿತ ಉಂಟಾಗಿ, ರಸ್ತೆ ಸಂಚಾರಕ್ಕೆ ಅಡ್ಡಿಯಾಗಿದೆ.
ಸಕಲೇಶಪುರ ತಾಲೂಕಿನ ದೋಣಿಗಾಲ್ ಬಳಿಯ ರಾಷ್ಟ್ರೀಯ ಹೆದ್ದಾರಿ 75 ಬಳಿ ರಸ್ತೆ ಕುಸಿದಿದೆ ಎಂದು ತಿಳಿದುಬಂದಿದೆ.
ಬೆಂಗಳೂರು ಹಾಗೂ ಮಂಗಳೂರಿಗೆ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದ್ದು, ನಿರಂತರ ಮಳೆಯಿಂದಾಗಿ ರಸ್ತೆ ಕುಸಿತ ಉಂಟಾಗಿದೆ. ಸದ್ಯ ಈ ಮಾರ್ಗದಲ್ಲಿ ಘನ ವಾಹನ ಸಂಚಾರ ಬಂದ್ ಆಗಿದ್ದು, ಪ್ರಯಾಣಿಕರು ಪರ್ಯಾಯ ಮಾರ್ಗದ ಮೊರೆ ಹೋಗಿದ್ದಾರೆ
ಘನ ವಾಹನಗಳಿಗೆ ಚಾರ್ಮಾಡಿ ಹಾಗೂ ಮಡಿಕೇರಿ ರಸ್ತೆಯಲ್ಲಿ ಹೋಗುವುದು ಕಷ್ಟವಾಗಿದ್ದು ಶಿರಾಡಿ ಘಾಟ್ ನ ರಸ್ತೆಯೂ ಬಿರುಕುಬಿಟ್ಟ ಪರಿಣಾಮ ಸರಕು ಸಾಗಾಣೆಗೆ ತೊಡಕುಂಟಾಗಲಿದೆ.
ಇದೀಗ ಘಟನಾ ಸ್ಥಳದಲ್ಲಿ ರಸ್ತೆ ಸರಿಪಡಿಸುವ ಕಾರ್ಯಾಚರಣೆ ಆರಂಭಗೊಂಡಿದೆ.