ಕರಾವಳಿ

ಯುವ ಫೋಟೋಗ್ರಾಫರ್ ಐಸಿವೈಎಂ ಅಧ್ಯಕ್ಷ, ಆತ್ಮಹತ್ಯೆ

ಮುಲ್ಕಿ, ಜು.22: ಫೋಟೋಗ್ರಾಫರ್ ರೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕಿನ್ನಿಗೋಳಿ ಸಮೀಪದ ಕಾಪಿಕಾಡ್ ಉರೇಕಾ ಬಳಿ ನಡೆದಿದೆ.

ಮೃತ ಯುವಕನನ್ನು ರಾಹುಲ್ ಕಾಲಿನ್ ಫರ್ನಾಂಡಿಸ್ (26) ಎಂದು ಗುರುತಿಸಲಾಗಿದೆ.

ಮೃತ ಯುವಕ ಕಿನ್ನಿಗೋಳಿಯಲ್ಲಿ ಆರ್. ಸಿ. ಎಫ್ ಹೆಸರಿನ ಫೋಟೋ ಸ್ಟುಡಿಯೋ ನಡೆಸುತ್ತಿದ್ದು, ಬುಧವಾರ ರಾತ್ರಿ 10 ಗಂಟೆ ಬಳಿಕ ಏಕಾಏಕಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ತಂದೆ ಅಸೌಖ್ಯದಿಂದ ಇರುವ ಕಾರಣ ರಾಹುಲ್ ತನ್ನ ತಂದೆಯ ಕೊಠಡಿಯಲ್ಲೇ ಮಲಗುತ್ತಿದ್ದ. ತಾಯಿ ಮಧ್ಯರಾತ್ರಿ ಎರಡು ಗಂಟೆಗೆ ಬಂದು ನೋಡಿದಾಗ ಮಗ ನಾಪತ್ತೆಯಾಗಿರುವುದನ್ನು ಕಂಡು ಗಾಬರಿಯಾಗಿ ಹುಡುಕಾಟ ನಡೆಸಿದಾಗ ಮನೆ ಹಿಂಬದಿಯಲ್ಲಿರುವ ಬಾವಿಯಲ್ಲಿ ಮಗನ ಮೃತದೇಹ ಪತ್ತೆಯಾಗಿದೆ.
ಜೀವನದಲ್ಲಿ ಜಿಗುಪ್ಸೆಗೊಂಡು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಮೃತ ಯುವಕ ರಾಹುಲ್ ಕಳೆದ ದಿನದ ಹಿಂದೆ ನನಗೆ ನಾಲ್ಕು ಲಕ್ಷ ರೂ ನ ಬೈಕ್ ಬೇಕು ಎಂದು ತಂದೆ ಜೊತೆ ಹಠಹಿಡಿದಿದ್ದ ಎನ್ನಲಾಗಿದೆ. ಆತ್ಮಹತ್ಯೆ ಮಾಡುವುದಕ್ಕೆ ಮುನ್ನ ತನ್ನ ಫೇಸ್ ಬುಕ್ ಹಾಗೂ ವಾಟ್ಸಪ್ ಡಿಲೀಟ್ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ

ಮೃತ ಯುವಕ ರಾಹುಲ್ ಕಿನ್ನಿಗೋಳಿ ಚರ್ಚ್ ನ ಐಸಿವೈಎಂ ಘಟಕದ ಅಧ್ಯಕ್ಷನಾಗಿದ್ದು, ಉತ್ತಮ ಕ್ರೀಡಾಪಟು ಹಾಗೂ ಎಲ್ಲರ ಜೊತೆ ಒಳ್ಳೆಯ ಒಡನಾಟ ಹೊಂದಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ.
ಸ್ಥಳಕ್ಕೆ ಮುಲ್ಕಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು ಪ್ರಕರಣ ದಾಖಲಿಸಿದ್ದಾರೆ

Related Articles

Leave a Reply

Your email address will not be published. Required fields are marked *

Back to top button
error: Content is protected !!