ಕರಾವಳಿ

ಉಡುಪಿ: ಲೆಕ್ಕಪರಿಶೋಧಕನ ಶವ ಪತ್ತೆ…!

ಉಡುಪಿ: ಕಳೆದ ಒಂದು ವಾರದ ಹಿಂದೆ ನಾಪತ್ತೆಯಾಗಿದ್ದ ಉಡುಪಿ ದೊಡ್ಡಣಗುಡ್ಡೆ ಕರಂಬಳ್ಳಿಯ 5ನೇ ರಸ್ತೆಯ ನಿವಾಸಿ ಸತೀಶ್ ಕುಮಾರ್ (54) ಅವರ ಮೃತದೇಹ ಮನೆಯ ಬಾವಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಮಂಗಳವಾರ ಪತ್ತೆಯಾಗಿದೆ.

ಅಗ್ನಿಶಾಮಕ ದಳದ ಸಹಾಯದಿಂದ ಮೃತದೇಹವನ್ನು ಮೇಲೆತ್ತಲಾಗಿದೆ. ವ್ಯಕ್ತಿ ಒಂದು ವಾರದ ಹಿಂದೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಶವವನ್ನು ವೈದ್ಯಕೀಯ ಪರೀಕ್ಷೆಗಾಗಿ ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಯ ಶವಗಾರಕ್ಕೆ ಸಾಗಿಸಲು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು, ಉಚಿತ ಅಂಬುಲೇನ್ಸ್ ಸೇವೆಯನ್ನು ಒದಗಿಸಿ ಇಲಾಖೆಗೆ ಸಹಕರಿಸಿದರು. ಮಣಿಪಾಲ ಪೊಲೀಸ್ ಠಾಣೆಯ ಠಾಣಾಧಿಕಾರಿ ರಾಜಶೇಖರ್ ಹೊಂದಾಳಿ ಘಟನಾ ಸ್ಥಳದಲ್ಲಿದ್ದ ಕಾನೂನು ಪ್ರಕ್ರಿಯೆ ನಡೆಸಿದರು.

ಸತೀಶ್ ಕುಮಾರ್ ಜುಲೈ 28ರ ಸಂಜೆ 4 ಗಂಟೆಯಿಂದ ಮನೆಯಿಂದ ಹೊರಗಡೆ ಹೋದವರು ವಾಪಸ್ಸು ಬಂದಿರಲಿಲ್ಲ. ಸಂಬಂಧಿಕರು ಹಾಗೂ ಸ್ನೇಹಿತರು ಹುಡುಕಾಡಿದರೂ ಪತ್ತೆಯಾಗಿರಲಿಲ್ಲ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

Leave a Reply

Your email address will not be published. Required fields are marked *

Back to top button
error: Content is protected !!

Adblock Detected

Please consider supporting us by disabling your ad blocker