ರಾಜ್ಯ

ಮಂಗಳೂರು: ಮಾಸ್ಕ್ ಧರಿಸಿ ಎಂದು ಹೇಳಿದ ಪಿಡಿಒ ಮೇಲೆ ಹಲ್ಲೆ

ಮಂಗಳೂರು: ಮಾಸ್ಕ್​ ಧರಿಸದೇ ಕ್ರಿಕೆಟ್ ಆಡುತ್ತಿದ್ದವರನ್ನು ಪ್ರಶ್ನಿಸಿದ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯೋರ್ವರ ಮೇಲೆ ಇಬ್ಬರು ಪುಂಡರು ಹಲ್ಲೆ ಮಾಡಿದ  ಘಟನೆ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ತಾಲೂಕಿನ ಬದ್ರಿಯಾನಗರದಲ್ಲಿ ಮಂಗಳವಾರ ( ಮೇ.25) ನಡೆದಿದೆ.  ಮಲ್ಲೂರು ಗ್ರಾಮ ಪಂಚಾಯತ್ ಪಿಡಿಒ ರಾಜೇಂದ್ರ ಶೆಟ್ಟಿ ಅವರ ಮೇಲೆ  ಹಲ್ಲೆ ನಡೆದಿದೆ.

ಬದ್ರಿಯಾನಗರ ಮೈದಾನದಲ್ಲಿ ಮಾಸ್ಕ್​ ಹಾಕದೆ ಆಟವಾಡುತ್ತಿದ್ದವರನ್ನು ಗಮನಿಸಿದ ಪಿಡಿಒ ರಾಜೇಂದ್ರ ಶೆಟ್ಟಿ ಮಾಸ್ಕ್​ ಧರಿಸದಿದ್ದನ್ನು ಪ್ರಶ್ನಿಸಿದ್ದಾರೆ. ಯುವಕರಿಗೆ ಮಾಸ್ಕ್ ಹಾಕುವಂತೆ ಸೂಚಿಸಿದ್ದಾರೆ. ಮಾಸ್ಕ್ ಹಾಕದೇ ಗುಂಪು ಸೇರಿದ್ದನ್ನು ಪ್ರಶ್ನಿಸಿ ತಮ್ಮ ಮೊಬೈಲ್​ನಲ್ಲಿ ಫೋಟೋ ತೆಗೆಯಲು ಮುಂದಾಗಿದ್ದಾರೆ.

ಇದರಿಂದ ಸಿಟ್ಟಿಗೆದ್ದ ಕ್ರಿಕೆಟ್ ಆಡುತ್ತಿದ್ದವರ ಇಬ್ಬರು ಪುದುಗ್ರಾಮದ ಕುಂಪಲ ಮಜಲು ನಿವಾಸಿಗಳು ಪಿಡಿಒ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಮಹಮ್ಮದ್ ಇದಾಯುತುಲ್ಲಾ ಹಾಗೂ ಅಹ್ಮದ ಬಸೀರ್ ಹಲ್ಲೆ ನಡೆಸಿದ ಆರೋಪಿಗಳು. ಈ ಘಟನೆಯ ಕುರಿತು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಬಂಧಿಸಿದ್ದಾರೆ.

Leave a Reply

Your email address will not be published. Required fields are marked *

Back to top button
error: Content is protected !!

Adblock Detected

Please consider supporting us by disabling your ad blocker