ರಾಜ್ಯ

Breaking News : 8 ಜಿಲ್ಲೆಗಳಲ್ಲಿ ಜೂ.21ರವರೆಗೆ ಲಾಕ್‌ಡೌನ್ ವಿಸ್ತರಣೆ !?

ದಕ್ಷಿಣಕನ್ನಡ, ಮೈಸೂರು, ಮಂಡ್ಯ, ತುಮಕೂರು, ಬೆಳಗಾವಿ, ಚಿಕ್ಕಮಗಳೂರು, ಹಾಸನ ಮತ್ತು  ಶಿವಮೊಗ್ಗ ಈ ಎಂಟು ಜಿಲ್ಲೆಗಳ ಡಿಸಿಗಳ ಜೊತೆ ಇಂದು ಮಧ್ಯಾಹ್ನ ಮುಖ್ಯಮಂತ್ರಿ ಯಡಿಯೂರಪ್ಪನವರು ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿದರು.

ಅದರಂತೆ ದಕ್ಷಿಣ ಕನ್ನಡ ಸೇರಿದಂತೆ ಈ ಮೇಲಿನ ಎಂಟು ಜಿಲ್ಲೆಗಳಲ್ಲಿ ಲಾಕ್ ಡೌನ್ ಅನ್ನು ವಿಸ್ತರಿಸಲಾಗಿದೆ ಎಂದು ತಿಳಿದುಬಂದಿದೆ. ಈ ಜಿಲ್ಲೆಗಳಲ್ಲಿ ಲಾಕ್ಡೌನ್ ಮತ್ತು 1ವಾರ  ಮುಂದುವರಿಯಲಿದೆ. ಈ ಸಂಬಂಧ ಸಂಜೆಯ ಹೊತ್ತಿಗೆ ಮಾರ್ಗಸೂಚಿ ಪ್ರಕಟವಾಗುವ ನಿರೀಕ್ಷೆ ಇದೆ. ಈ ಎಂಟು ಜಿಲ್ಲೆಗಳಲ್ಲಿ ಪಾಸಿಟಿವಿಟಿ ಪ್ರಮಾಣ 10 ಕ್ಕೂ ಅಧಿಕವಾಗಿ ಇರುವುದು ಒಂದು ಕಾರಣವಾದರೆ, ಸೋಂಕಿತರ ಸಂಖ್ಯೆ ಅಂದುಕೊಂಡ ವೇಗದಲ್ಲಿ ಈ ಜಿಲ್ಲೆಗಳಲ್ಲಿ ಇಳಿಯುತ್ತಿಲ್ಲ. ಆದುದರಿಂದ ಈ ಜಿಲ್ಲೆಗಳಲ್ಲಿ ಲಾಕ್ ಡೌನ್ ಸಡಿಲಿಸಿದರೆ ಮತ್ತಷ್ಟು ಪಾಸಿಟಿವ್ ಕೇಸುಗಳು ಹೆಚ್ಚಳವಾಗುವುದರಲ್ಲಿ ಯಾವುದೇ ಅನುಮಾನ ಇಲ್ಲ. ಆದುದರಿಂದ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮುಖ್ಯಮಂತ್ರಿಯವರನ್ನು ಲಾಕ್ ಡೌನ್ ಅನ್ನು ವಿಸ್ತರಿಸಬೇಕೆಂದು ಒತ್ತಾಯ ಮಾಡಿದ್ದರು.

ಉಳಿದ ಜಿಲ್ಲೆಗಳಲ್ಲಿ ಜೂನ್14ರ ನಂತರ ಸೆಮಿ ಲಾಕ್ಡೌನ್ ಜಾರಿಗೆ ಬರಲಿದೆ !

ಡಿಸಿಗಳ ಜೊತೆ ಮುಖ್ಯಮಂತ್ರಿ ಯಡಿಯೂರಪ್ಪನವರು ಸಂವಾದ ನಡೆಸಿದ ನಂತರ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಲಾಕ್ಡೌನ್ ಅನ್ನೋ ವಿಸ್ತರಿಸಲು ಕೇಳಿಕೊಂಡಿದ್ದರು. ಅದರಂತೆ ಎಂಟು ಜಿಲ್ಲೆಗಳಲ್ಲಿ ಲಾಕ್ ಡೌನ್ ನ್ನು ಮುಂದುವರಿಸಲು ನಿರ್ಧರಿಸಲಾಗಿದೆ.

ಉಳಿದ 22 ಜಿಲ್ಲೆಗಳಲ್ಲಿ ಅನ್ ಲಾಕ್ ಮಾಡುವ ಉದ್ದೇಶ ಇಟ್ಟುಕೊಂಡಿರುವ ಸರ್ಕಾರವು, ಒಟ್ಟು ಐದು ಹಂತಗಳಲ್ಲಿ ಅನ್ ಲಾಕ್ ಮಾಡಲು ನಿರ್ಧರಿಸಿದೆ ಎನ್ನಲಾಗಿದೆ. ಬೆಂಗಳೂರಿಗೆ ಪ್ರತ್ಯೇಕ ಅನ್ ಲಾಕ್ ಮಾರ್ಗಸೂಚಿ ಬರಲಿದೆ.

ಅನ್ಲಾಕ್ ಮಾಡಲು ಹೊರಟಿರುವ ಜಿಲ್ಲೆಗಳಲ್ಲಿ ಫಿಫ್ಟಿ ಪರ್ಸೆಂಟ್ ಮಾದರಿಯಲ್ಲಿ ಹಂತ-ಹಂತವಾಗಿ ಜಾರಿಗೆ ಬರಲಿದೆ ಎನ್ನಲಾಗಿದೆ. ದಿನ ಬಿಟ್ಟು ದಿನ ಅಂಗಡಿ ತೆರೆಯಲು ಅವಕಾಶ ಅಥವಾ ಸಮ ಬೆಸ ದಿನಗಳಲ್ಲಿ ಕಾರ್ಯಾಚರಿಸಲು ಅವಕಾಶ ಮುಂತಾದ ಸಾಧ್ಯತೆಗಳು ಸರಕಾರದ ಮುಂದಿದ್ದು ಇವತ್ತು ಸಂಜೆ ಮಂತ್ರಿಗಳ ಸಭೆಯ ನಂತರ ಒಂದು ಸ್ಪಷ್ಟ ಚಿತ್ರಣ ದೊರೆಯಲಿದೆ.

Leave a Reply

Your email address will not be published. Required fields are marked *

Back to top button
error: Content is protected !!

Adblock Detected

Please consider supporting us by disabling your ad blocker