
ಬೆಂಗಳೂರು: ರಾಜ್ಯದ ಎಲ್ಲ ಬೀದಿ ಬದಿ ವ್ಯಾಪಾರಿಗಳಿಗೆ ಪ್ರಧಾನಮಂತ್ರಿ ಆತ್ಮನಿರ್ಭರ್ ಯೋಜನೆಯಡಿ 2ನೇ ಅವಧಿಗೆ ತಲಾ 20 ಸಾವಿರ ರೂ. ಸಾಲ ವಿತರಿಸುವಂತೆ ರಾಷ್ಟ್ರೀಯ ಜೀವನೋಪಾಯ ಅಭಿಯಾನ ನಿರ್ದೇಶಕಿ ಎನ್. ಮಂಜುಶ್ರೀ ಆದೇಶಿಸಿದ್ದಾರೆ.
ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಮಂತ್ರಾಲಯದಿಂದ ಈಗಾಗಲೇ ದೇಶದಲ್ಲಿ 20 ಲಕ್ಷ ಬೀದಿ ಬದಿ ವ್ಯಾಪಾರಿಗಳಿಗೆ ತಲಾ 10 ಸಾವಿರ ರೂ. ಸಾಲ ವಿತರಿಸಲಾಗಿದೆ.
ವ್ಯಾಪಾರಿಗಳು ಕೂಡ ಮಾಸಿಕ ಕಂತುಗಳನ್ನು ಆಯಾ ಬ್ಯಾಂಕ್ಗಳಿಗೆ ಪಾವತಿಸುತ್ತಿದ್ದಾರೆ. ಹಿಗಾಗಿ, ಮುಂದಿನ ದಿನಗಳಲ್ಲಿ ಬಿಬಿಎಂಪಿ ಕಲ್ಯಾಣ ವಿಭಾಗದ ವಿಶೇಷ ಆಯುಕ್ತರು ಮತ್ತು ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು ತಮ್ಮ ವ್ಯಾಪ್ತಿಯ ಮೊದಲ ಹಂತದಲ್ಲಿ ಸಾಲ ಪಡೆದ ಶೇ.50 ಬೀದಿ ಬದಿ ವ್ಯಾಪಾರಿಗಳಿಗೆ 2ನೇ ಹಂತದಲ್ಲಿ 20 ಸಾವಿರ ರೂ. ಸಾಲ ವಿತರಣೆಗೆ ಕ್ರಮವಹಿಸುವಂತೆ ಸೂಚಿಸಿದ್ದಾರೆ