ಕರಾವಳಿ

ಅಸಂಘಟಿತ ಕಾರ್ಮಿಕರ ಇ-ಶ್ರಮ್ ಕಾರ್ಡ್ – ಪ್ರಧಾನಮಂತ್ರಿ ಗ್ರಾಮೀಣ ಡಿಜಿಟಲ್ ಸಾಕ್ಷರತಾ ಉಚಿತ ನೋಂದಣಿ ಅಭಿಯಾನ

ಸಂಚಲನ ( ರಿ.), ಉಡುಪಿ ಹಾಗೂ ಅಮ್ಮ ಎಂಟರ್ಪ್ರೈಸಸ್ ಬ್ರಹ್ಮಾವರ ನೇತೃತ್ವದಲ್ಲಿ 22ನೇ ವಾರಂಬಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಸರ್ವ ಸದಸ್ಯರ ಸಹಭಾಗಿತ್ವದಲ್ಲಿ ಇಂದು ದಿನಾಂಕ 26-09-2021 ರಂದು ಬ್ರಹ್ಮಾವರ ನಾರಾಯಣ ಗುರು ಸಭಾಭವನದಲ್ಲಿ ಆಯೋಜಿಸಲಾದ ಅಸಂಘಟಿತ ಕಾರ್ಮಿಕರ ಇ-ಶ್ರಮ್ ಕಾರ್ಡ್ ಹಾಗೂ ಪ್ರಧಾನಮಂತ್ರಿ ಗ್ರಾಮೀಣ ಡಿಜಿಟಲ್ ಸಾಕ್ಷರತಾ ಉಚಿತ ನೋಂದಣಿ ಅಭಿಯಾನ ಕಾರ್ಯಕ್ರಮದಲ್ಲಿ ಶಾಸಕ ಶ್ರೀ ಕೆ ರಘುಪತಿ ಭಟ್ ರವರು ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಬ್ರಹ್ಮಾವರ ವ್ಯವಸಾಯ ಸೇವಾ ಸಹಕಾರ ಸಂಘದ (ನಿ.) ನಿರ್ದೇಶಕರಾದ ಬಿರ್ತಿ ರಾಜೇಶ್ ಶೆಟ್ಟಿ, ಸಂಚಲನ (ರಿ.) ಉಡುಪಿ ಗೌರವಾಧ್ಯಕ್ಷರಾದ ಕೆ. ಶಿವರಾಮ, ಜಿಲ್ಲಾ ಕಾರ್ಮಿಕ ಇಲಾಖೆಯ ಆಯುಕ್ತರಾದ ಕುಮಾರ್ ಬಿ. ಆರ್, ಸೇವಾ ಸಿಂಧು ಜಿಲ್ಲಾ ಯೋಜನಾ ವ್ಯವಸ್ಥಾಪಕರಾದ ಅರುಣ್ ಎಸ್. ಕೆ, ಉದ್ಯಮಿಗಳಾದ ಎಸ್. ನಾರಾಯಣ್, ಉಡುಪಿ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಶಾಖಾ ಮುಖ್ಯಸ್ಥರಾದ ಹಫೀಝ್ ರೆಹಮಾನ್, ಕರ್ನಾಟಕ ಬಿಲ್ಡರ್ಸ್ ಅಂಡ್ ಡೆವಲಪರ್ಸ್, ಬ್ರಹ್ಮಾವರದ ಚೇತನ್ ಶೆಟ್ಟಿ, ಸಮಾಜ ಸೇವಕರಾದ ಅರಲ್ ಡಿಸೋಜ, ಸುಮತ ನಾಯಕ್ ಅಮ್ಮುಂಜೆ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!