
ಉಡುಪಿ : ರೋಟರಿ ಕಲ್ಯಾಣಪುರ ಮತ್ತು ಶ್ರೀ ವಿಘ್ನೇಶ್ವರ ಪ್ರಿಂಟರ್ಸ್ ವತಿಯಿಂದ ಶಿಕ್ಷಕರ ದಿನಾಚರಣೆಯ ಪರವಾಗಿ ಗುರು ವಂದನೆಯನ್ನು ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಮಲ್ಪೆ ರಾಘವೇಂದ್ರ ಹಾಗೂ ಅವರ ಪತ್ನಿ ಕೆ ರತ್ನ ಎಮ್ ಆರ್ ರನ್ನು ಸನ್ಮಾನಿಸಲಾಯಿತು.
ರೋಟರಿ ಅಧ್ಯಕ್ಷ ಡೆಸ್ಮನ್ಡ್ ವಾಜ್ ಕಾರ್ಯದರ್ಶಿ ಲಿಯೋ ಅಂದ್ರಾದೆ ವಿಘ್ನೇಶ್ವರ ಪ್ರಿಂಟರ್ಸ್ ಮಾಲಕರಾದ ಎಮ್ ಮಹೇಶ್ ಕುಮಾರ್ ನಿವೃತ್ತ ತರಂಗ ಸಂಪಾದಕರಾದ ಚೆಲುವ ರಾಜ್ ಪೆರಂಪಳ್ಳಿ ನಿವೃತ್ತ ಪೋಸ್ಟ್ ಮಾಸ್ಟರ್ ಶೇಖರ್ ಪೂಜಾರಿ ಕಲ್ಮಾಡಿ, ಪ್ರಮೋದ್ ಸುವರ್ಣ, ಮನೀಶ್ ಕೃಷ್ಣ, ಮಧು ಕಿರಣ್, ಮಧುಸ್ಮಿತಾ
ಮೊದಲಾದವರು ಉಪಸ್ಥಿತರಿದ್ದರು