
ಮಂಗಳೂರು: ದುಷ್ಕರ್ಮಿಗಳ ತಂಡವೊಂದು ವ್ಯಕ್ತಿಯೊಬ್ಬನಿಗೆ ಚೂರಿಯಿಂದ ಇರಿದ ಘಟನೆ ನಗರದ ಹೊರವಲಯ ಎದುರುಪದವಿನಲ್ಲಿ ಗುರುವಾರ ತಡರಾತ್ರಿ ನಡೆದಿದೆ.
ಮದ್ಯ ಕುಡಿದು ಕ್ಷುಲ್ಲಕ ಕಾರಣಕ್ಕೆ ಜಗಳವಾಗಿದ್ದು, ಬಾಗಲಕೋಟೆ ಮೂಲದ ನಿಂಗಣ್ಣ ನಿಗೆ ಚೂರಿಯಿಂದ ಇರಿಯಲಾಗಿದೆ. ಎದುರುಪದವು ನಿವಾಸಿ ದಿವಾಕರ್ ಯಾನೆ ದಿವ ತಂಡದಿಂದ ಈ ಕೃತ್ಯ ನಡೆದಿದೆಯಾಗಿದೆ. ಕುಡಿದು ಕ್ಷುಲ್ಲಕ ಕಾರಣಕ್ಕೆ ಜಗಳ ಆಡಿ ಚೂರಿಯಿಂದ ಇರಿಯಲಾಗಿದ್ದು, ಗಾಯಾಳು ನಿಂಗಣ್ಣನನ್ನು ನಗರದ ವೆನ್ ಲಾಕ್ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಕಾವೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆಂದು ತಿಳಿದುಬಂದಿದೆ.