
ಬುಧವಾರ ಒಂದೇ ದಿನ ರಾಜ್ಯದಲ್ಲಿ ಹಿಂದಿನ ಎಲ್ಲಾ ದಾಖಲೆಗಳನ್ನು ಅಳಿಸಿಹಾಕಲಾಗಿದ್ದು,ಬರೋಬ್ಬರಿ 4169 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.
ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 51,422ಕ್ಕೇರಿಕೆಯಾಗಿದೆ. ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 70 ಸೋಂಕಿತರು ಸೇರಿದಂತೆ ರಾಜ್ಯದಲ್ಲಿ ಒಟ್ಟು 104 ಮಂದಿ ಸಾವನ್ನಪ್ಪಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಅವರು ತಿಳಿಸಿದ್ದಾರೆ.
ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 1032ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಕೊರೊನಾ ಮರಣ ನರ್ತನಕ್ಕೆ ಇವತ್ತು 70 ಮಂದಿ ಬಲಿಯಾಗಿದ್ದು, ಸಿಲಿಕಾನ್ ಸಿಟಿಯಲ್ಲಿ ಸಾವನ್ನಪ್ಪಿದ್ದವರ ಸಂಖ್ಯೆ 507ಕ್ಕೆ ಏರಿಕೆ ಆಗಿದೆ.
ರಾಜ್ಯದ ಏಳು ಜಿಲ್ಲೆಗಳಲ್ಲಿ ಲಾಕ್ಡೌನ್ ಇದ್ದರೂ ಸೋಂಕಿತರ ಸಂಖ್ಯೆ ಮಾತ್ರ ಹೆಚ್ಚುತ್ತಲೇ ಇರುವುದು ಜನತೆಯಲ್ಲಿ ಆತಂಕ ಸೃಷ್ಟಿಸಿದೆ. ಕಳೆದ 24 ಗಂಟೆಗಳಲ್ಲಿ 1263 ಮಂದಿ ಗುಣಮುಖರಾಗಿದ್ದು, ಇಲ್ಲಿಯವರೆಗೆ 19,729 ಜನರು ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ ರಾಜ್ಯದಲ್ಲಿ 30,655 ಸಕ್ರಿಯ ಪ್ರಕರಣಗಳಿವೆ ಎಂದು ಸಚಿವ ಸುಧಾಕರ್ ಮಾಹಿತಿ ನೀಡಿದ್ದಾರೆ.
ಬೆಂಗಳೂರು ನಗರ – 2344, ದಕ್ಷಿಣ ಕನ್ನಡ – 238, ಧಾರವಾಡ – 176, ವಿಜಯಪುರ – 144, ಮೈಸೂರು – 130, ಕಲಬುರಗಿ – 123, ಉಡುಪಿ – 113, ರಾಯಚೂರು – 101, ಬೆಳಗಾವಿ – 92, ಉತ್ತರ ಕನ್ನಡ – 79, ಚಿಕ್ಕಬಳ್ಳಾಪುರ – 77, ಬೀದರ್ – 53, ಶಿವಮೊಗ್ಗ – 46, ಬಳ್ಳಾರಿ – 44, ಗದಗ – 44, ಕೋಲಾರ – 43, ಬಾಗಲಕೋಟೆ – 39, ಯಾದಗಿರಿ – 34, ಕೊಪ್ಪಳ – 32, ಹಾಸನ – 31, ಬೆಂಗಳೂರು ಗ್ರಾಮಾಂತರ – 31, ಚಿಕ್ಕಮಗಳೂರು – 30, ದಾವಣಗೆರೆ – 25, ಚಿತ್ರದುರ್ಗ – 21, ಹಾವೇರಿ ಮತ್ತು ಕೊಡಗು – 18, ಚಾಮರಾಜನಗರ – 16, ತುಮಕೂರು – 12, ಮಂಡ್ಯ – 11 ಮತ್ತು ರಾಮನಗರ – 04 ಕೊರೋನಾ ಸೋಂಕಿನ ಪ್ರಕರಣ ಪತ್ತೆಯಾಗಿದೆ.