ಕರಾವಳಿ
ಉಡುಪಿ: ಬಾವಿಗೆ ಹಾರಿ ಸಿಟಿ ಬಸ್ ಚಾಲಕ ಆತ್ಮಹತ್ಯೆ

ಉಡುಪಿ: ಬಾವಿಗೆ ಹಾರಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯ ಮಧ್ವನಗರದಲ್ಲಿ ಇಂದು ನಡೆದಿದೆ.
ಕೊಡವೂರು ಗ್ರಾಮದ ಮಧ್ವನಗರದ ಅಶೋಕ್ ಕುಮಾರ್ (57) ಆತ್ಮಹತ್ಯೆ ಮಾಡಿಕೊಂಡವರು. ಇವರು ಖಾಸಗಿ ಸಿಟಿ ಬಸ್ ಚಾಲಕರಾಗಿದ್ದು, ಕಳೆದ 15 ವರ್ಷಗಳಿಂದ ಮದ್ಯಸೇವನೆಯ ಅಭ್ಯಾಸವನ್ನು ಹೊಂದಿದ್ದರು. ಇದೇ ಖಿನ್ನತೆಯಲ್ಲಿ ಮನನೊಂದು ಆದಿ ಉಡುಪಿಯ ಅಂಬೇಡ್ಕರ್ ಭವನದ ಬಳಿ ಇರುವ ಸರ್ಕಾರಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.