ಕರಾವಳಿ

ಮುನಿಯಾಲು ಆಯುರ್ವೇದ ಕಾಲೇಜು: ರಕ್ತದಾನ ಶಿಬಿರ

ಮಣಿಪಾಲ: ಮುನಿಯಾಲು ಆಯುರ್ವೇದ ಕಾಲೇಜಿನ ಎನ್.ಎಸ್.ಎಸ್ ಘಟಕ ಮತ್ತು ಕಸ್ತೂರ್ಬಾ ಆಸ್ಪತ್ರೆ ರಕ್ತ ನಿಧಿ ಘಟಕ ಮಣಿಪಾಲ ಸಂಯುಕ್ತ ಆಶ್ರಯದಲ್ಲಿ ಎನ್.ಎಸ್.ಎಸ್ ದಿನದ ಪ್ರಯುಕ್ತ ದಿನಾಂಕ ರಕ್ತದಾನ ಶಿಬಿರವು ಬುದ್ಧಾಯುರ್ವೇದ ಸಭಾಭವನದಲ್ಲಿ ನಡೆಯಿತು.

ಕಸ್ತೂರ್ಬಾ ಆಸ್ಪತ್ರೆ ರಕ್ತ ನಿಧಿ ಘಟಕದ ಮುಖ್ಯಸ್ಥರಾದ ಡಾ. ಶಮೀ ಶಾಸ್ತ್ರಿ ಶಿಬಿರವನ್ನು ಉದ್ಘಾಟಿಸಿ ರಕ್ತದಾನದ ಮಹತ್ವದ ಕುರಿತು ಉಪನ್ಯಾಸವನ್ನು ನೀಡಿದರು. ಮುನಿಯಾಲು ಆಯುರ್ವೇದ ವ್ಯೆದ್ಯಕೀಯ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಸತ್ಯನಾರಾಯಣ ಬಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಎನ್.ಎಸ್.ಎಸ್ ಯೋಜನಾಧಿಕಾರಿ ಡಾ. ಸುದೀಪ ಸ್ವಾಗತಿಸಿ, ನಿಖಿಲ್ ಡಿ ವಂದಿಸಿದರು. ಎನ್.ಎಸ್.ಎಸ್ ಸ್ವಯಂಸೇವಕರಾದ ರಶ್ಮಿ ಮತ್ತು ಹರ್ಷಿತ ಕಾರ್ಯಕ್ರಮವನ್ನು ನಿರ್ವಹಿಸಿದರು. ಸಂಸ್ಥೆಯ ಬೋಧಕ, ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ಶಿಬಿರದಲ್ಲಿ 84 ಯೂನಿಟ್ ರಕ್ತ ಸಂಗ್ರಹಿಸಲಾಯಿತು.

Related Articles

Leave a Reply

Your email address will not be published. Required fields are marked *

Back to top button
error: Content is protected !!