10ನೇ ತರಗತಿ ಪರೀಕ್ಷೆ ರದ್ದು ಮಾಡಿ ವಿದ್ಯಾರ್ಥಿಗಳಿಗೆ ಮುಂದಿನ ಕ್ಲಾಸ್ಗೆ ಗ್ರೇಸ್ ನೀಡಿದ ಸರ್ಕಾರ !

ಹೈದರಾಬಾದ್ :ತೆಲಾಂಗಾಣದಲ್ಲಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಹತ್ತನೇ ತರಗತಿಯ ಮಕ್ಕಳಿಗೆ ಯಾವುದೇ ಪರೀಕ್ಷೆ ಇಲ್ಲದೆ ಪಾಸ್ ಮಾಡುವ ನಿರ್ಧಾರವನ್ನು ತೆಲಾಂಗಾಣದ ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ಕೈಗೊಂಡು ಮಕ್ಕಳಿಗೆ ಯಾವುದೇ ಪರೀಕ್ಷೆ ಇಲ್ಲದೆ ಪಾಸ್ ಮಾಡಿ ಎಂದು ಘೋಷಣೆ ಮಾಡಿದ್ದಾರೆ.
ಮಕ್ಕಳ ಇಂಟರ್ನಲ್ ಗ್ರೇಡ್ ಆಧಾರದ ಮೇಲೆ ಅಂಕ ನೀಡಿ ಪಾಸ್ ಮಾಡಲು ತೆಲಂಗಾಣ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ .ಕರ್ನಾಟಕದಲ್ಲೂ ಎಸ್ಎಸ್ಎಲ್ಸಿ ಪರೀಕ್ಷೆಗಳನ್ನು ರದ್ದು ಮಾಡಬೇಕೆಂಬ ಕೂಗು ಕೇಳಿಬಂದಿದ್ದವು ಆದರೆ ಕರ್ನಾಟಕದಲ್ಲಿ ಇದೇ ಜೂನ್ 25ರಿಂದ ಜುಲೈ 3ರ ವರೆಗೆ ಪರೀಕ್ಷೆಗಳು ನಡೆಯಲಿವೆ.
The CM decided that all the 10th class students would be promoted to the next class by giving grades to them based on their internal assessment marks: Telangana CMO https://t.co/QLDZw6l4tJ
— ANI (@ANI) June 8, 2020