ಕರಾವಳಿತಾಜಾ ಸುದ್ದಿಗಳು
ಪಡುಕೆರೆ ಬೀಚ್ ನಲ್ಲಿ ಸ್ವಚ್ಛ ಭಾರತ ಅಭಿಯಾನ

ಮಹಾಲಕ್ಷ್ಮಿ ಕೋ-ಆಪರೇಟಿವ್ ಬ್ಯಾಂಕ್ ಲಿ. ಉಡುಪಿ ವತಿಯಿಂದ ನೇಶನ್ ಫಸ್ಟ್ ತಂಡದ ಸಹಭಾಗಿತ್ವದಲ್ಲಿ ಇಂದು ದಿನಾಂಕ 02-10-2021 ರಂದು ಪಡುಕೆರೆ ಬೀಚ್ ನಲ್ಲಿ ಹಮ್ಮಿಕೊಳ್ಳಲಾದ “ಸ್ವಚ್ಛ ಭಾರತ ಅಭಿಯಾನ” ಕಾರ್ಯಕ್ರಮದಲ್ಲಿ ಶಾಸಕರಾದ ಶ್ರೀ ಕೆ. ರಘುಪತಿ ಭಟ್ ರವರು ಭಾಗವಹಿಸಿ ಅಭಿಯಾನದಲ್ಲಿ ತೊಡಗಿಸಿಕೊಂಡವರಿಗೆ ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಘವೇಂದ್ರ ಕಿಣಿ, ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಪ್ರವೀಣ್ ಶೆಟ್ಟಿ ಕಪ್ಪೆಟ್ಟು ಹಾಗೂ ಜಿಲ್ಲಾಧಿಕಾರಿಗಳಾದ ಕೂರ್ಮಾ ರಾವ್ ಎಂ, ಉಡುಪಿ ನಗರ ಸಭೆಯ ಪೌರಾಯುಕ್ತರಾದ ಉದಯ್ ಶೆಟ್ಟಿ, ನೇಶನ್ ಫಸ್ಟ್ ತಂಡದ ಸೂರಜ್ ಕಿದಿಯೂರು ಮತ್ತು ನೇಶನ್ ಫಸ್ಟ್ ತಂಡದ ಸದಸ್ಯರು ಉಪಸ್ಥಿತರಿದ್ದರು.