ಕರಾವಳಿತಾಜಾ ಸುದ್ದಿಗಳು

ಶಾರದೋತ್ಸವದಿಂದ ಗ್ರಾಮದಲ್ಲಿ ಹಬ್ಬದ ವಾತಾವರಣ: ಯಶ್ಪಾಲ್ ಸುವರ್ಣ

ಬಿಲ್ಲಾಡಿ: ಸಾರ್ವಜನಿಕ ಶಾರದೋತ್ಸವ ಸಮಿತಿ ಬಿಲ್ಲಾಡಿ ಮತ್ತು ಬಿಲ್ಲಾಡಿ ಫ್ರೆಂಡ್ಸ್ ಯುವ ವೇದಿಕೆ ಇದರ ಆಶ್ರಯದಲ್ಲಿ ಆಯೋಜಿಸಿದ 5 ನೇ ವರ್ಷದ ಶಾರದೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಸುವರ್ಣ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಬಿಲ್ಲಾಡಿ ಫ್ರೆಂಡ್ಸ್ ಯುವ ವೇದಿಕೆಯ ನೇತೃತ್ವದಲ್ಲಿ ಬಿಲ್ಲಾಡಿಯಲ್ಲಿ ಶಾರದೋತ್ಸವದ ಮೂಲಕ ಗ್ರಾಮದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಧಾರ್ಮಿಕತೆಯ ಜೊತೆಗೆ ವೇದಿಕೆಯ ನೇತೃತ್ವದಲ್ಲಿ ಇನ್ನಷ್ಟು ಸಮಾಜಮುಖಿ ಕಾರ್ಯಗಳಾಗಲಿ ಎಂದು ಶುಭ ಹಾರೈಸಿದರು.

ಶಾರದೋತ್ಸವದ ಪ್ರಯುಕ್ತ ಗೋವಿಗಾಗಿ ಮೇವು ಕಾರ್ಯಕ್ರಮವನ್ನು ಬಿಜೆಪಿ ಕುಂದಾಪುರ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಶೆಟ್ಟಿ ವಂಡಾರು ಹಸ್ತಾಂತರಿಸಿದರು. ನಿವೃತ್ತ ಶಿಕ್ಷಕ ಚಂದ್ರಶೇಖರ ಶೆಟ್ಟಿಯವರನ್ನು ಸನ್ಮಾನಿಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಬಿ ಕೆ ಹೆಗ್ಡೆ ವಹಿಸಿದ್ದರು.

ಶಾರದೋತ್ಸವ ಸಮಿತಿಯ ಸ್ಥಾಪಕಾಧ್ಯಕ್ಷರಾದ ಪ್ರಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ಬಿಲ್ಲಾಡಿ ಫ್ರೆಂಡ್ಸ್ ಯುವ ವೇದಿಕೆ ಅಧ್ಯಕ್ಷರಾದ ಪ್ರಿಯದರ್ಶನ್ ಶೆಟ್ಟಿ, ಶಾರದೋತ್ಸವ ಸಮಿತಿ ಅಧ್ಯಕ್ಷರಾದ ನಾರಾಯಣ ನಾಯ್ಕ್, ಹೆಗ್ಗುಂಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಗಣೇಶ್ ಶೆಟ್ಟಿ, ಉದ್ಯಮಿ ಗ್ರಾ.ಪಂ ಸದಸ್ಯರಾದ ಗುರುಪ್ರಸಾದ್ ನೀರ್ಜೆಡ್ಡು, ಬಿಲ್ಲಾಡಿ ಗ್ರಾ.ಪಂ ಉಪಾದ್ಯಕ್ಷ ಪ್ರಕಾಶ್ ಶೆಟ್ಟಿ ನೈಲಾಡಿ, ಮಾಜಿ ತಾ.ಪಂ ಸದಸ್ಯೆ ನಿರ್ಮಲಾ ಶೆಟ್ಟಿ, ಮಾಜಿ ಗ್ರಾ.ಪಂ ಅಧ್ಯಕ್ಷೆ ರುಕ್ಮಿಣಿ ಶೆಟ್ಟಿ, ಶಾರದೋತ್ಸವ ಸಮಿತಿ ಮಹಿಳಾ ಅಧ್ಯಕ್ಷೆ ವೀಣಾ ಕೊಠಾರಿ, ಪ್ರಧಾನ ಕಾರ್ಯದರ್ಶಿ ಅಕ್ಷತ ಕುಂದರ್ ಮುಂತಾದವರು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!