ಬೆಳ್ತಂಗಡಿ : ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ – ಯುವಕರಿಂದ ಹಲ್ಲೆ, ತಡೆಯಲು ಬಂದಾತ ಸಾವು

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಸಮೀಪ ಆರು ಬಾಲಕಿಯ ಮೇಲೆ ವ್ಯಕ್ತಿಯೊಬ್ಬರು ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇಲೆ ಯುವಕರ ತಂಡವೊಂದು ಹಲ್ಲೆ ನಡೆಸಿದೆ.ಆಗ ಜಗಳ ತಡೆಯಲು ಬಂದ ವ್ಯಕ್ತಿಗೆ ಹಲ್ಲೆ ನಡೆದಿದ್ದು ಆದರೆ ಅವರು ಆಸ್ಪತ್ರೆಗೆ ದಾಖಲಿಸುವ ವೇಳೆ ಸಾವನ್ನಪ್ಪಿದ ಘಟನೆ ಸಂಭವಿಸಿದೆ
ಸಾವನ್ನಪ್ಪಿದವರು ಬೆಳ್ತಂಗಡಿ ತಾಲೂಕಿನ ಪರಾರಿ ಶಾಂತಿನಗರದ ನಿವಾಸಿ ಜಾರಪ್ಪ ನಾಯ್ಕ್ (55) ಎಂದು ತಿಳಿಯಲಾಗಿದೆ.
ಆರೋಪಿತ ನಾರಾಯಣ ನಾಯ್ಕ್ (47) ಎಂಬವರು ಸ್ಥಳೀಯ ಆರು ವರ್ಷದ ಬಾಲಕಿಗೆ ಕಳೆದ 10 ದಿನಗಳ ಹಿಂದೆ ಲೈಂಗಿಕ ಕಿರುಕುಳ ನೀಡಿದ್ದರು ಎಂದು ಮಾಹಿತಿ ತಿಳಿದು ಬಂದಿದೆ.
ಆ ವಿಚಾರವಾಗಿ ಅದಾಗಲೆ ರಾಜಿ ಸಂದಾನ ನಡೆದಿತ್ತು. ಆದರೆ ಇಂದು ಸಂಜೆ ವೇಳೆ ಮತ್ತೆ ಬಾಲಕಿಯನ್ನು ಕರೆದು ಮಾತಾಡಿಸಿದ್ದನ್ನು ಯಾರೋ ನೋಡಿದ ಹಿನ್ನೆಲೆ ನಾರಾಯಾಣ ನಾಯ್ಕ್ ಅವರನ್ನು ಯುವಕರ ತಂಡ ತಡೆದು ಹಲ್ಲೆಗೆ ಮುಂದಾಗಿದೆ. ಇದನ್ನು ನೋಡಿದ ಜಾರಪ್ಪ ನಾಯ್ಕ್ ಹಲ್ಲೆ ತಪ್ಪಿಸಲು ಬಂದಾಗ ಅವರನ್ನು ಯುವಕರು ತಳ್ಳಿದ್ದಾರೆ. ಕೆಳಗೆ ಬಿದ್ದ ಜಾರಪ್ಪ ನಾಯ್ಕ್ ಮತ್ತು ಗಂಭೀರ ಹಲ್ಲೆ ಗೊಳಗಾದ ನಾರಾಯಣ ನಾಯ್ಕ್ ಅವರನ್ನು ಜಾರಪ್ಪ ಅವರ ಮಗ ರಾಜಶೇಖರ್ ಬಂದು ವಾಹನದಲ್ಲಿ ಉಜಿರೆ ಖಾಸಗಿ ಆಸ್ಪತ್ರೆಗೆ ಕರೆತಂದಿದ್ದಾರೆ.ಆದರೆ ಆ ವೇಳೆಯಲ್ಲಿ ಜಾರಪ್ಪ ನಾಯ್ಕ್ ಆಸ್ಪತ್ರೆಯಲ್ಲಿ ಮತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ನಂತರ ಮೃತದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಿದ್ದು ನಾರಾಯಣ ನಾಯ್ಕ್ ಅವರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.
ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಜಾರಪ್ಪ ನಾಯ್ಕ್ ಅವರ ಪುತ್ರ ರಾಜಶೇಖರ್ ದೂರು ನೀಡಿದ್ದಾರೆ.
ಈ ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪೊಲೀಸರು ಕೊಲೆ ಪ್ರಕರಣವನ್ನು ತನಿಖೆ ನಡೆಸುತ್ತಿದ್ದಾರೆ.