ಕರಾವಳಿ
ಉದ್ಯಮಿ, ಬಿಜೆಪಿ ಹಿರಿಯ ನಾಯಕ ಮ್ಯಾಗ್ನಮ್ ಜಾಹೀರಾತು ಸಂಸ್ಥೆಯ ಸ್ಥಾಪಕ, ಆರೆಸ್ಸೆಸ್ ಕಟ್ಟಾಳು ಸುಧೀರ್ ಘಾಟೆ ನಿಧನ

ಮಂಗಳೂರು : ಮ್ಯಾಗ್ನಮ್ ಜಾಹೀರಾತು ಸಂಸ್ಥೆಯ ಸ್ಥಾಪಕ, ರಾಜ್ಯ ಬಿಜೆಪಿ ಯುವ ಮೋರ್ಚಾದ ಮಾಜಿ ಪ್ರಧಾನ ಕಾರ್ಯದರ್ಶಿ ಸುಧೀರ್ ಘಾಟೆ(64) ಅವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು.
ಆರ್ ಎಸ್ಎಸ್ ಲೆಕ್ಕ ಪರಿಶೋಧಕರ ಕಚೇರಿಯಲ್ಲಿ ತನ್ನ ವೃತ್ತಿ ಜೀವನವನ್ನು ಆರಂಭಿಸಿದ್ದ ಸುಧೀರ್ ಘಾಟೆ 1995ರಲ್ಲಿ ರಾಜ್ಯ ಬಿಜೆಪಿಯ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ಪಕ್ಷ ಕಟ್ಟಿದ್ದರು.
1992ರಲ್ಲಿ ಜಾಹೀರಾತು ಸಂಸ್ಥೆ,’ ಮ್ಯಾಗ್ನಮ್ ಇಂಟರ್ ಗ್ರಾಫಿಕ್ಸ್’ ಕಟ್ಟಿ ಬೆಳೆಸಿದ್ದ ಸುಧೀರ್ ಘಾಟೆ ಮಂಗಳೂರಿನ ಪ್ರಸಿದ್ಧ ಉದ್ಯಮಿಯಾಗಿದ್ದರು.
ಬಿಎಂಎಸ್ ನ ಪ್ರಧಾನ ಕಾರ್ಯದರ್ಶಿಯಾಗಿದ್ದ ದಿವಂಗತ ಪ್ರಭಾಕರ್ ಘಾಟೆ- ಶಾರದಾ ಘಾಟೆ ದಂಪತಿ ಪುತ್ರರಾದ ಸುಧೀರ್ ಪಿಆರ್ ಐಎಸ್ ನ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
ಅವರು ಪತ್ನಿ, ಪುತ್ರ, ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಆಗಲಿದ್ದಾರೆ..