ಕರಾವಳಿ

ಕಲ್ಯಾಣಪುರ: ಅಂಚೆಚೀಟಿ ಪ್ರದರ್ಶನ; ಸಮವಸ್ತ್ರ ವಿತರಣೆ

ಕಲ್ಯಾಣಪುರ: ಡಾ. ಟಿ.ಎಂ.ಎ ಪೈ ಪ್ರೌಢಶಾಲೆಯಲ್ಲಿ 66ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಅಂಚೆಚೀಟಿ ಸಂಗ್ರಹಕಾರ ಕಲ್ಯಾಣಪುರ ಲಕ್ಷ್ಮೀನಾರಾಯಣ ನಾಯಕ್ ಅವರ ಸಂಗ್ರಹದಲ್ಲಿರುವ ಕರ್ನಾಟಕಕ್ಕೆ ಸಂಬಂಧಿಸಿದ ವೈವಿಧ್ಯಮಯ ಅಂಚೆಚೀಟಿ ಪ್ರದರ್ಶನ ಹಾಗೂ ಮಣಿಪಾಲ ಫೈನಾನ್ಸ್ ಸಂಸ್ಥೆಯವರು ನೀಡಿರುವ ಉಚಿತ ಸಮವಸ್ತ್ರಗಳನ್ನು ವಿತರಿಸುವ ಕಾರ್ಯಕ್ರಮ ಶಾಲೆಯ ಸಭಾಂಗಣದಲ್ಲಿ ನಡೆಯಿತು. ಸುಜಯ ಗಣೇಶ್ ಇವರು ಶಾಲೆಗೆ ಉಚ್ಜಿತವಾಗಿ ಸ್ಯಾನಿಟೈಸ್ ಕಿಟ್ ನೀಡಿದರು.

ಶಾಲಾ ಆಡಳಿತ ಮಂಡಳಿಯ ಸದಸ್ಯರಾದ ಸುಮನ ಸುಬ್ಬಣ್ಣ ಪೈ ಮುಖ್ಯ ಅತಿಥಿಯಾಗಿದ್ದ ಈ ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿಯ ಸದಸ್ಯ ಗಣೇಶ್ ಶೇರಿಗಾರ್ ಅತಿಥಿಯಾಗಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಶಾಲಾ ಮುಖ್ಯೋಪಾಧ್ಯಾಯ ಶೇಖರ್ ಪಿ ಸ್ವಾಗತಿಸಿ, ಅಧ್ಯಾಪಕ ಬಾಲಕೃಷ್ಣ ನಾಯಕ್ ವಂದಿಸಿದರು.

ಸಹ ಶಿಕ್ಷಕಿ ಸುರೇಖಾ ಕಾರ್ಯಕ್ರಮ ನಿರೂಪಿಸಿದರು. ಶಾಲೆಯ ಸಿಬ್ಬಂದಿ ವರ್ಗ, ಹಳೆ ವಿದ್ಯಾರ್ಥಿಗಳು, ಪೋಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!