ರಾಷ್ಟ್ರೀಯ

ಪಟಾಕಿ ಸಿಡಿಸುವ ವಿಚಾರದಲ್ಲಿ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯ

ಶಮ್ಲಿ: ಕಾಲೊನಿಯೊಂದರಲ್ಲಿ ಪಟಾಕಿ ಸಿಡಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಆರಂಭವಾದ ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿ ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ಉತ್ತರಪ್ರದೇಶದ ಶಮ್ಲಿ ಜಿಲ್ಲೆಯಲ್ಲಿ ನಡೆದಿದೆ.

ದೀಪಾವಳಿಯ ಸಂಭ್ರಮದಲ್ಲಿದ್ದ ಶಮ್ಲಿ ಜಿಲ್ಲೆಯ ಶಿವ ಕಾಲೋನಿ ನಿವಾಸಿಗಳು ಪಟಾಕಿ ಹಚ್ಚಲು ತಯಾರಿ ನಡೆಸಿದ್ದರು. ಆದರೆ ಇದೇ ವೇಳೆ ಪಟಾಕಿ ಸಿಡಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ಏರ್ಪಟ್ಟಿದೆ. ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಕೈಗೆ ಸಿಕ್ಕಿದ ವಸ್ತುಗಳಿಂದ ಪರಸ್ಪರ ಬಡಿದಾಡಿಕೊಂಡ ಬಳಿಕ ಕಲ್ಲು ತೂರಾಟ ನಡೆಸಿದ್ದಾರೆ.

ಈ ನಡುವೆ ಗುಂಪಿನಲ್ಲಿದ್ದ ಸಂಜೀವ್ ಸೈನಿ ಹಾಗೂ ರಾಹುಲ್ ಎಂಬಾತನಿಗೆ ಹರಿತವಾದ ಆಯುಧದಿಂದ ಇರಿಯಲಾಗಿತ್ತು. ಇಬ್ಬರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಸಂಜೀವ್ ಸೈನಿ ಆಸ್ಪತ್ರೆ ತಲುಪುವ ವೇಳೆಗೆ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದರು. ರಾಹುಲ್’ಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

 

Related Articles

Leave a Reply

Your email address will not be published. Required fields are marked *

Back to top button
error: Content is protected !!