ಕರಾವಳಿ

ಕಾಪು: ಹೃದಯಾಘಾತದಿಂದ ಕಳತ್ತೂರಿನ CRPF ಯೋಧ ಜಾರ್ಖಾಂಡ್’ನಲ್ಲಿ ಸಾವು!

ಕಾಪು: ಕಾಪು ತಾಲೂಕು ಕಳತ್ತೂರು ಚಂದ್ರನಗರ ಕನ್ನಡರಬೆಟ್ಟು ನಿವಾಸಿ ನವೀನ್ ಕುಮಾರ್ ಕರ್ಕಡ (50) ಅವರು ಜಾರ್ಖಂಡ್ ನಲ್ಲಿ ಸೇನಾ ಕರ್ತವ್ಯದಲ್ಲಿರುವಾಗಲೇ ಹೃದಯಾಘಾತದಿಂದಾಗಿ ಮೃತಪಟ್ಟ ಘಟನೆ ನಿನ್ನೆ (ಶನಿವಾರ) ನಡೆದಿದೆ.

ಸಿಐಎಸ್ಎಫ್ ಯೋಧರಾಗಿ ಕಳೆದ 29 ವರ್ಷಗಳಿಂದ ಸೇನಾ ಕರ್ತವ್ಯ ನಿರತರಾಗಿದ್ದ ಅವರು, ಮುಂದಿನ ವರ್ಷ ಕರ್ತವ್ಯದಿಂದ ನಿವೃತ್ತಿ ಹೊಂದುವವರಿದ್ದರು.
ಬಿಹಾರ, ರಾಂಚಿ, ದೆಹಲಿ, ಮೈಸೂರು, ನಾಗ್ಪುರ ಸಹಿತ ದೇಶದ ವಿವಿಧೆಡೆಗಳ ಸೇನಾ ನೆಲೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು.

ಜಾರ್ಖಂಡ್ ಸೇನಾ‌ ನೆಲೆಯಿಂದ ಕೋಲ್ಕತ್ತಾ, ಮುಂಬಯಿ ಮಾರ್ಗ ಮೂಲಕವಾಗಿ ಮಂಗಳೂರು ವಿಮಾನ ನಿಲ್ದಾಣದಿಂದ ಮೃತದೇಹವನ್ನು ಮನೆಗೆ ತರಲಾಗಿದ್ದು, ಇಂದು ಸಂಜೆ ಪಾದೂರು ಚರ್ಚ್ ನಲ್ಲಿ ಅಂತಿಮ ವಿಧಿ ವಿಧಾನ ನೆರವೇರಲಿದೆ. ಅವರಿಗೆ ಪತ್ನಿ, ಇಬ್ಬರು ಪುತ್ರರು, ಇಬ್ಬರು ಸಹೋದರರು ಮತ್ತು ಇಬ್ಬರು ಸಹೋದರಿಯನ್ನು ಆಗಲಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!