ರಾಜ್ಯ

ತೆಂಗಿನಮರ ಕಡಿಯುತ್ತಿದ್ದಾಗ ಮೈಮೇಲೆ ಬಿದ್ದು ನವವಿವಾಹಿತ ಮೃತ್ಯು

ಬಂಟ್ವಾಳ : ತೆಂಗಿನ ಮರ ಬಿದ್ದು ಯುವಕನೋರ್ವ ಮೃತಪಟ್ಟ ಧಾರುಣ ಘಟನೆ ಬಂಟ್ವಾಳ ತಾಲೂಕಿನ ಶಂಭೂರು ಗ್ರಾಮದ ನಾಯಿಲ ಎಂಬಲ್ಲಿ ಜ. 9ರಂದು ನಡೆದಿದೆ.

ನಾಯಿಲ ಬೆಟ್ಟುಗದ್ದೆ ನಿವಾಸಿ ದಿ. ಪೂವಪ್ಪ ಪೂಜಾರಿ ಎಂಬವರ ಪುತ್ರ ಯತಿರಾಜ್ (37) ಮೃತಪಟ್ಟ ಯುವಕ. ಇವರಿಗೆ ನಾಲ್ಕು ತಿಂಗಳ ಹಿಂದೆಯಷ್ಟೇ ವಿವಾಹವಾಗಿತ್ತು.

ಸ್ಥಳೀಯ ಕೃಷಿಕರೊಬ್ಬರ ತೋಟದಲ್ಲಿ ತೆಂಗಿನಮರ 3 ಕಡಿಯುವ ಗುತ್ತಿಗೆಯನ್ನು ಯತಿರಾಜ್ ಅವರು ಪಡೆದುಕೊಂಡಿದ್ದು, ಆ ಕೆಲಸ ಮಾಡುತ್ತಿದ್ದ ವೇಳೆ ದುರ್ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

ಕಡಿಯುತ್ತಿದ್ದ ತೆಂಗಿನ ಮರ ಯತಿರಾಜ್ ಅವರ ಮೇಲೆ ಬಿದ್ದಿದ್ದು ಗಾಯಗೊಂಡ ಅವರನ್ನು ತಕ್ಷಣ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಕರೆದೊಯ್ಯುಲಾಯಿತ್ತಾರೂ ಆದಾಗಲೇ ಅವರು
ಮೃತಪಟ್ಟಿದ್ದರು ಎನ್ನಲಾಗಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!