ರಾಜ್ಯ

ಸಾಲದ ಅರ್ಜಿ ತಿರಸ್ಕರಿಸಿದ ಬ್ಯಾಂಕಿಗೆ ಬೆಂಕಿ ಹಚ್ಚಿದ ವ್ಯಕ್ತಿ ಪೊಲೀಸ್ ವಶಕ್ಕೆ..!

ಹಾವೇರಿ: ಸಾಲದ ಅರ್ಜಿಯನ್ನು ತಿರಸ್ಕೃರಿಸಿದ್ದಕ್ಕಾಗಿ ಕೋಪಗೊಂಡ ವ್ಯಕ್ತಿಯೊಬ್ಬ ಬ್ಯಾಂಕ್ ಗೆ ಬೆಂಕಿ ಹಚ್ಚಿರುವ ಘಟನೆ ಹಾವೇರಿಯಲ್ಲಿ ನಡೆದಿದೆ.

ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದ್ದು, ಕಾಗಿನೆಲ್ಲಿ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 436, 477, 435 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಾಲವನ್ನು ಪಡೆಯುವ ಉದ್ದೇಶದಿಂದ ವ್ಯಕ್ತಿಯೊಬ್ಬ ಬ್ಯಾಂಕ್ ಅಧಿಕಾರಿಗಳನ್ನು ಸಂಪರ್ಕಿಸಿದ ಸಂದರ್ಭದಲ್ಲಿ ಪೂರಕ ದಾಖಲೆಗಳನ್ನು ಒದಗಿಸದ ಹಿನ್ನೆಲೆಯಲ್ಲಿ ಆತನ ಅರ್ಜಿಯನ್ನು ತಿರಸ್ಕರಿಸಲಾಗಿತ್ತು. ಇದರಿಂದ ಕೋಪಗೊಂಡ ಆತ ಬ್ಯಾಂಕ್ ಗೆ ಹಂಚಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!