ಕರಾವಳಿ

ಬಿಜೆಪಿ ಹೆರ್ಗ ಮಹಾ ಶಕ್ತಿಕೇಂದ್ರದಲ್ಲಿ ಸಮರ್ಪಣಾ ದಿನಾಚರಣೆ

ಭಾರತೀಯ ಜನಸಂಘದ ಸಂಸ್ಥಾಪಕರಲ್ಲೊಬ್ಬರಾದ ಪಂಡಿತ್ ದೀನದಯಾಳ್ ಉಪಾಧ್ಯಾಯರವರ ಬಲಿದಾನದ ದಿನವನ್ನು ಸಮರ್ಪಣಾ ದಿನವಾಗಿ ಬಿಜೆಪಿ ಹೆರ್ಗ ಮಹಾ ಶಕ್ತಿಕೇಂದ್ರದ ವತಿಯಿಂದ ಫೆ.11ರಂದು ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಆಚರಿಸಲಾಯಿತು.

ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಧರ್ಮ ಜಾಗರಣ ಸಮನ್ವಯ ಪೂರ್ಣಾವಧಿ ಕಾರ್ಯಕರ್ತ ಅಶೋಕ್ ಪರ್ಕಳ ಪಂಡಿತ್ ದೀನದಯಾಳ್ ಉಪಾಧ್ಯಾಯರವರ ಜೀವನಾದರ್ಶಗಳ ಬಗ್ಗೆ ಉಪನ್ಯಾಸವನ್ನು ನಡೆಸಿಕೊಟ್ಟರು.

ಪಂಡಿತ್ ದೀನದಯಾಳ್ ಉಪಾಧ್ಯಾಯರವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಪಕ್ಷದ ಚಟುವಟಿಕೆಗಳಿಗೆ ನಿಧಿ ಸಮರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಉಡುಪಿ ನಗರಸಭಾ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ಬಿಜೆಪಿ ಉಡುಪಿ ನಗರ ಪ್ರಧಾನ ಕಾರ್ಯದರ್ಶಿ ಮಂಜುನಾಥ ಮಣಿಪಾಲ, ಹೆರ್ಗ ಮಹಾ ಶಕ್ತಿಕೇಂದ್ರದ ಉಸ್ತುವಾರಿ ಶಿವಕುಮಾರ್ ಅಂಬಲಪಾಡಿ, ಮಹಾ ಶಕ್ತಿಕೇಂದ್ರದ ಸಹ ಸಂಚಾಲಕ ಶಿವಾನಂದ್ ಕಾಮತ್, ಉಡುಪಿ ನಗರಸಭಾ ಸದಸ್ಯರಾದ ಕಲ್ಪನಾ ಸುಧಾಮ, ವಿಜಯಲಕ್ಷ್ಮಿ, ಅಶ್ವಿನಿ ಅರುಣ್ ಪೂಜಾರಿ, ಹೆರ್ಗ ಮಹಾ ಶಕ್ತಿಕೇಂದ್ರ ವ್ಯಾಪ್ತಿಯ ಶಕ್ತಿಕೇಂದ್ರಗಳು ಮತ್ತು ಬೂತ್ ಗಳ ಅಧ್ಯಕ್ಷರು, ಕಾರ್ಯದರ್ಶಿಗಳು, ಪಕ್ಷದ ಪ್ರಮುಖರು, ವಿವಿಧ ಸ್ತರದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!