ಕರಾವಳಿ

ಸೈಕ್ಲಿಂಗ್ ವೇಳೆ ಮರಕ್ಕೆ ಡಿಕ್ಕಿ: ವೈದ್ಯ ವಿದ್ಯಾರ್ಥಿನಿ ಸಾವು

ಕಾರವಾರ: ಪ್ರವಾಸಕ್ಕೆ ಬಂದಿದ್ದ ಛತ್ತೀಸ್ ಗಡ ಮೂಲದ ವೈದ್ಯ ವಿದ್ಯಾರ್ಥಿಯೊಬ್ಬಳು ಸೈಕ್ಲಿಂಗ್ ಮಾಡುವಾಗ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಸಾವನ್ನಪ್ಪಿರುವ ಘಟನೆ ದಾಂಡೇಲಿಯ ಬಿರಂಪಾಲಿ ಬಳಿ ನಡೆದಿದೆ.

ಛತ್ತೀಸ್ ಗಢದ ದೇವಿಕಾ ಸಂಜಯ್ ವಾಸವಣೆ (25) ಮೃತಪಟ್ಟವರು. ವೈದ್ಯ ವಿದ್ಯಾರ್ಥಿನಿಯಾಗಿದ್ದ ಆಕೆಯು ಧಾರವಾಡಕ್ಕೆ ಸೆಮಿನಾರ್ಗೆ ಆಗಮಿಸಿದ್ದರು. ರಜಾ ಇರುವ ಹಿನ್ನೆಲೆಯಲ್ಲಿ ಧಾರವಾಡದಿಂದ ದಾಂಡೇಲಿಗೆ ಪ್ರವಾಸಕ್ಕೆ ಹೊರಟಿದ್ದರು.

ದಾಂಡೇಲಿಯಲ್ಲಿ ಹಿಡನ್ ವ್ಯಾಲಿ ಹೋಮ್ ಸ್ಟೇನಲ್ಲಿ ಸ್ನೇಹಿತರ ಜತೆ ಸಂಜಯ್ ತಂಗಿದ್ದರು. ಈ ವೇಳೆ ಸೈಕ್ಲಿಂಗ್ ಮಾಡುವಾಗ ಆಯತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಸಾವಿಗೀಡಾಗಿದ್ದಾರೆ. ಘಟನೆಯಲ್ಲಿ ಯುವತಿಯ ತಲೆಯ ಭಾಗಕ್ಕೆ ತೀವ್ರ ಸ್ವರೂಪದ ಗಾಯವಾಗಿದ್ದು, ಮೂಗಿನಿಂದ ರಕ್ತಸ್ರಾವವಾಗಿತ್ತು. ಪರಿಣಾಮ, ಯುವತಿ ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ದಾಂಡೇಲಿ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!